Homeಕರೋನಾ ತಲ್ಲಣಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ, ಉನ್ನತ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳು ಏಪ್ರಿಲ್ 17 ರ ಉಪ ಚುನಾವಣೆಗೆ ದಮೋಹ್ ದಲ್ಲಿ ಪ್ರಚಾರ ನಡೆಸಿದರು. ಇದರಿಂದಾಗಿ ಕೋವಿಡ್‌ನಿಂದ ಏಳು ನಾಯಕರು ಸಾವನ್ನಪ್ಪಿದರೆ, ಇತರ ಕೆಲವರು ಕುಟುಂಬ ಸದಸ್ಯರನ್ನು ಕಳೆದುಕೊಂಡರು.

ಮತದಾನ ಮುಂದೂಡಿದ್ದರೆ ಪ್ರಜಾಪ್ರಭುತ್ವವೇನೂ ಅಲ್ಲಾಡಿ ಹೋಗುತ್ತಿತ್ತಾ ಎಂದು ಮೃತ ನಾಯಕರ ಕುಟುಂಬಗಳು ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಏಪ್ರಿಲ್ 9 ರಂದು ಮಧ್ಯಪ್ರದೇಶದಲ್ಲಿ 4,882 ಹೊಸ ಕೋವಿಡ್ ಪ್ರಕರಣಗಳು ದಾಖಲಾದಾಗ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ದಮೋಹ್ ಜಿಲ್ಲೆಯಲ್ಲಿ ಬೃಹತ್ ಚುನಾವಣಾ ರ‍್ಯಾಲಿ ನಡೆಸುತ್ತಿದ್ದರು. ಹಿಂದಿನ ದಿನ, ಚೌಹಾಣ್ ಸರ್ಕಾರವು ದಮೋಹ್ ಹೊರತುಪಡಿಸಿ ಇಡೀ ರಾಜ್ಯದಲ್ಲಿ ವಾರಾಂತ್ಯದ ಲಾಕ್‌ಡೌನ್ ಘೋಷಿಸಿತ್ತು. ಇಲ್ಲಿ ಮಾತ್ರ ಏಪ್ರಿಲ್ 17ರಂದು ನಡೆದ ವಿಧಾನಸಭೆ ಉಪಚುನಾವಣೆ ನಿಮಿತ್ತ ಲಾಕ್‌ಡೌನ್ ಘೋಷಣೆ ಮಾಡಿರಲಿಲ್ಲ.

ಮಧ್ಯಪ್ರದೇಶದ ಉನ್ನತ ರಾಜಕೀಯ ನಾಯಕರು ಈ ಉಪ ಚುನಾವಣೆಯಲ್ಲಿ ರ‍್ಯಾಲಿಗಳನ್ನು ನಡೆಸಿದರು. ಬಿಜೆಪಿಯ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉಮಾಭಾರತಿ, ಹಾಗೂ ಕಾಂಗ್ರೆಸ್‌ನ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಉಪಚುನಾವಣೆಯಲ್ಲಿ ಬೃಹತ್ ರ‍್ಯಾಲಿಗಳಲ್ಲಿ ಭಾಗಿಯಾಗಿದ್ದರು.

ಏಪ್ರಿಲ್ 16ರಂದು, ಮಾಜಿ ಸಿಎಂ ದಿಗ್ವಿಜಯಸಿಂಗ್ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿತು. ಹಿರಿಯ ನಾಯಕರಂತೆ ಸ್ಥಳೀಯ ನಾಯಕರೂ ಬೃಹತ್ ರ‍್ಯಾಲಿ, ಪ್ರಚಾರಗಳಲ್ಲಿ ಭಾಗಿಯಾದರು. ಮುಂದಿನ ಏಳು ದಿನಗಳಲ್ಲಿ ಅವರಲ್ಲಿ ಏಳು ಮಂದಿ ಸಾವನ್ನಪ್ಪಿದರು.

ಪ್ರಾಣ ಕಳೆದುಕೊಂಡ ಬಿಜೆಪಿ ಸದಸ್ಯರಲ್ಲಿ ದಮೋಹ್ ಜಿಲ್ಲಾ ಮಾಜಿ ಮುಖ್ಯಸ್ಥ ದೇವನಾರಾಯಣ್ ಶ್ರೀವಾಸ್ತವ, ವಾರ್ಡ್ ಕೌನ್ಸಿಲರ್ ಮಹೇಂದ್ರ ರೈ, ಯುವ ಮೋರ್ಚಾ ನಾಯಕ ಸಂದೀಪ್ ಪಂಥಿ ಮತ್ತು ಬಿನಾ ನಗರ ಪಕ್ಷದ ಮುಖ್ಯಸ್ಥ ಅಮೃತ ಖತಿಕ್ ಸೇರಿದ್ದಾರೆ. ಕಾಂಗ್ರೆಸ್‌ನ ಪೈಕಿ ಮಾಜಿ ರಾಜ್ಯ ವಾಣಿಜ್ಯ ಸಚಿವ ಮತ್ತು ದಮೋಹ್ ಉಪಚುನಾವಣೆ ಉಸ್ತುವಾರಿ ಬ್ರಜೇಂದ್ರ ಸಿಂಗ್ ರಾಥೋಡ್, ಮಹಿಳಾ ವಿಭಾಗದ ರಾಜ್ಯ ಅಧ್ಯಕ್ಷೆ ಮಾಂಡ್ವಿ ಚೌಹಾಣ್ ಮತ್ತು ಸ್ಥಳೀಯ ಮುಖಂಡ ಗೋಕುಲ್ ಪಟೇಲ್ ಕೋವಿಡ್‌ಗೆ ಬಲಿಯಾಗಿದ್ದರೆ.

ಕೊರೊನಾಕ್ಕೆ ಹೆದರಬೇಡಿ: ಚುನಾವಣಾ ಆಯೋಗದ ಪೋಸ್ಟರ್‌ಗಳು

ಇಲ್ಲಿನ ಕಾಂಗ್ರೆಸ್ ಶಾಸಕ ರಾಹುಲ್ ಲೋಧಿ ಅವರು ಪಕ್ಷವನ್ನು ತೊರೆದು 2020 ರ ಅಕ್ಟೋಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಾಗ ದಮೋಹ್ ಉಪಚುನಾವಣೆ ಅಗತ್ಯವಾಗಿತ್ತು. ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಿತು, ಜನರು ಹೊರಗೆ ಬಂದು ಮತ ಚಲಾಯಿಸುವಂತೆ ಸಕ್ರಿಯವಾಗಿ ಪ್ರೋತ್ಸಾಹಿಸಿತು ಮತ್ತು “ಭಯಪಡಬೇಡಿ” ಎಂದು ಪೋಸ್ಟರ್‌ಗಳನ್ನು ಹಾಕಿತ್ತು.

ಏಪ್ರಿಲ್ 1 ರಂದು, ಉಪಚುನಾವಣೆಯ ಪ್ರಚಾರ ಪ್ರಾರಂಭವಾಗುವ ಮುನ್ನ, ಜಿಲ್ಲೆಯಲ್ಲಿ ವರದಿಯಾದ ಕೋವಿಡ್ -19 ಪ್ರಕರಣಗಳ ಸಂಖ್ಯೆ 11 ಆಗಿತ್ತು. ಏಪ್ರಿಲ್ 6 ರಂದು, ಈ ಸಂಖ್ಯೆ 28 ಕ್ಕೆ ಏರಿತು, ಮತ್ತು 10 ದಿನಗಳ ನಂತರ, ಏಪ್ರಿಲ್ 16 ರಂದು, ಅಂದರೆ ಮತದಾನದ ಹಿಂದಿನ ದಿನ 377 ಹೊಸ ಪ್ರಕರಣಗಳು ಕಂಡುಬಂದವು. ಜಿಲ್ಲೆಯಲ್ಲಿ ಅದುವರೆಗಿನ ದೈನಿಕ ಸೋಂಕು ಪ್ರಮಾಣದಲ್ಲಿ ಇದೇ ಅಧಿಕವಾಗಿತ್ತು.

ಮತದಾನದ ಆರು ದಿನಗಳ ನಂತರ, ಏಪ್ರಿಲ್ 23 ರಂದು 165 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,060 ಕ್ಕೆ ತಲುಪಿತು.

ಮಧ್ಯಪ್ರದೇಶದ ಉನ್ನತ ನಾಯಕರ ರ‍್ಯಾಲಿಗಳ ಬಗ್ಗೆ ಆಶ್ಚರ್ಯವಾಯಿತು ಎಂದು ದಮೋಹ್ ನಿವಾಸಿಗಳು ತಿಳಿಸಿದ್ದಾರೆ. “ಆ ಸಮಯದಲ್ಲಿ ಪಶ್ಚಿಮ ಬಂಗಾಳ ಚುನಾವಣೆಗಳು ನಡೆಯದಿದ್ದರೆ, ಪ್ರಧಾನಿ ಮೋದಿ ಅಥವಾ ಅಮಿತ್ ಶಾ ಕೂಡ ದಮೋಹ್‌ಗೆ ಬರ‍್ತಾ ಇದ್ದರು ಎಂದು ನನಗೆ ಖಾತ್ರಿಯಿದೆ” ಎಂದು ನಾಗರಿಕರೊಬ್ಬರು ಹೇಳಿದ್ದಾರೆ.

ಮೇ 2 ರಂದು ಫಲಿತಾಂಶಗಳನ್ನು ಪ್ರಕಟಿಸುವ ಮುನ್ನ ಮಧ್ಯಪ್ರದೇಶದ ಹೈಕೋರ್ಟ್ ದಾಮೋಹ್ ದಲ್ಲಿ ವಿಜಯ ಮೆರವಣಿಗೆಗಳನ್ನು ನಿಷೇಧಿಸಿತು. ಆದರೆ ಅಷ್ಟೊತ್ತಿಗೆ ತಡವಾಗಿತ್ತು. ಉಪಚುನಾವಣೆಯ ನಂತರ, ದಮೋಹ್ ಮತಕ್ಷೇತ್ರ ಪ್ರತಿದಿನ ಸುಮಾರು 150-160 ಕೋವಿಡ್ ಪ್ರಕರಣಗಳನ್ನು ದಾಖಲಿಸುತ್ತಿದೆ.

‘ಯಾರೂ ಸಹಾಯ ಮಾಡಲು ಬಂದಿಲ್ಲ’

ಬಿಜೆಪಿ ನಾಯಕ ದೇವನಾರಾಯಣ್ ಶ್ರೀವಾಸ್ತವ ಅವರಲ್ಲಿ ಏಪ್ರಿಲ್ 17ರ ಉಪಚುನಾವಣೆಯ ಕೆಲವು ದಿನಗಳ ನಂತರ ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡವು. ಅವರು ಏಪ್ರಿಲ್ 27 ರಂದು ನಿಧನರಾದರು. ಅವರ 26 ವರ್ಷದ ಮಗಳು ಸೋನಾಕ್ಷಿ, ನಾವು ಪ್ರಚಾರಕ್ಕೆ ಹೋಗಬೇಡಿ ಎಂದು ತಂದೆಯನ್ನು ತಡೆಯಲು ಯತ್ನಿಸಿದೆವು. ಆದರೆ ಅವರ ಪಕ್ಷನಿಷ್ಟೆಗೆ ಕಟ್ಟುಬಿದ್ದು ಜೀವ ಕಳೆದುಕೊಂಡರು’ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಆದರೆ ಪಕ್ಷದ ಬಗ್ಗೆ ಈ ನಿಷ್ಠೆಯ ಹೊರತಾಗಿಯೂ, ಶ್ರೀವಾಸ್ತವ ಅನಾರೋಗ್ಯಕ್ಕೆ ಒಳಗಾದಾಗ “ಯಾರೂ ಸಹಾಯ ಮಾಡಲು ಬಂದಿಲ್ಲ” ಎಂದು ಸೋನಾಕ್ಷಿ ಆರೋಪಿಸಿದರು.

“ನಂತರ, ನಾವು ಅನೇಕ ಜನರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಜಯಂತ್ ಮಲೈಯಾ (ಬಿಜೆಪಿಯ ಹಿರಿಯ ಮುಖಂಡ ಮತ್ತು ದಮೋಹ್‌ನ ಮಾಜಿ ಶಾಸಕ) ಅವರಲ್ಲದೆ ಪಕ್ಷದ ಬೇರೆ ಯಾರೂ ಸಹಾಯ ಮಾಡಲಿಲ್ಲ. ಪ್ರತಿಯೊಬ್ಬರೂ ಟ್ವಿಟರ್‌ನಲ್ಲಿ ಅವರಿಗೆ ಸಂತಾಪ ಸಂದೇಶಗಳನ್ನು ಬರೆದಿದ್ದಾರೆ… ಆದರೆ ನಮಗೆ ನಿಜವಾದ ಸಹಾಯ ಬೇಕಾದಾಗ ಯಾರೂ ಸಹಾಯ ಮಾಡಲಿಲ್ಲ” ಎಂದು ಅವರು ಹೇಳಿದರು.

ಆರು ತಿಂಗಳಲ್ಲಿ, ಸೋನಾಕ್ಷಿ ತನ್ನ ಹೆತ್ತವರನ್ನು ಕಳೆದುಕೊಂಡಿದ್ದಾರೆ. ತಂದೆಯ ಸಾವಿಗೆ ಉಪ ಚುನಾವಣೆಯೇ ಕಾತಣ ಎಂದು ಅಪಾದಿಸಿದ್ದಾರೆ.

‘ಈ ಉಪಚುನಾವಣೆ ನಡೆಯದಿದ್ದಲ್ಲಿ ನಮ್ಮ ಪ್ರಜಾಪ್ರಭುತ್ವವು ಅಪಾಯಕ್ಕೆ ಸಿಲುಕುತ್ತಿರಲಿಲ್ಲ.… ಇದನ್ನು ಮುಂದೂಡಿದ್ದರೆ ಪ್ರಜಾಪ್ರಭುತ್ವವೇನೂ ಅಳ್ಳಾಡುತ್ತಿರಲಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಪೋಲ್‌ನ ಸಮಯವು ಹೆಚ್ಚು ಸೂಕ್ತವಲ್ಲ

ಕಾಂಗ್ರೆಸ್ ಅಭ್ಯರ್ಥಿ ಅಜಯ್ ಟಂಡನ್ ದಮೋಹ್ ಉಪಚುನಾವಣೆಯನ್ನು ಆರಾಮವಾಗಿ ಗೆದ್ದರು. ಆದರೆ ಅವರ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ ನಾಯಕರಲ್ಲಿ ಒಬ್ಬರಾದ ಲಾಲ್ ಚಂದ್ ರಾಯ್ ಅವರು ವಿಷಾದದಿಂದ ಹೊರಬರುತ್ತಾರೆ.

ಮತದಾನದ ಕೆಲವು ದಿನಗಳ ನಂತರ ಕಾಂಗ್ರೆಸ್ ನಾಯಕ ಲಾಲ್ ಚಂದ್ ಎಂಬ ನಾಯಕರಿಗೆ ಪಾಸಿಟಿವ್ ಕಾಣಿಸಿಕೊಂಡಿತು. ನಂತರ ಅವರ ಪತ್ನಿ ವಂದನಾ ಮತ್ತು ಅವರ 17 ವರ್ಷದ ಮಗ ಕೂಡ ಸೋಂಕಿಗೆ ಒಳಗಾಗಿದ್ದಾರೆ. ಲಾಲ್ ಚಂದ್ ಮತ್ತು ಅವರ ಮಗ ಚೇತರಿಸಿಕೊಂಡರೆ, ವಂದನಾ ನಿಧನರಾದರು

“ಚುನಾವಣಾ ಪ್ರಚಾರದಿಂದಾಗಿ ದಾಮೋಹ್ ದಲ್ಲಿನ ಹಲವಾರು ಕುಟುಂಬಗಳು ಹಾಳಾಗಿವೆ. ನನ್ನ ಜೀವನ ಸಂಗಾತಿ ಈ ಕಾರಣದಿಂದಾಗಿ ನಿಧನರಾದರು … ನಾನು ತುಂಬಾ ವಿಚಲಿತನಾಗಿದ್ದೇನೆ” ಎಂದು ಕಾಂಗ್ರೆಸ್ ನಾಯಕ ದಿ ಪ್ರಿಂಟ್‌ಗೆ ತಿಳಿಸಿದ್ದು, ಕೋವಿಡ್ ಹೆಚ್ಚುತ್ತಿರುವಾಗ ಉಪಚುನಾವಣೆ ನಡೆಸುವುದು ಸೂಕ್ತವಲ್ಲ ಎಂದಿದ್ದಾರೆ.

ಕೋವಿಡ್‌ಗೆ ಬಲಿಯಾದ ಬಿಜೆಪಿ ಕೌನ್ಸಿಲರ್ ಮಹೇಂದ್ರ ರಾಯ್ ಅವರ 17 ವರ್ಷದ ಮಗ ಸಚಿನ್ ರೈ, ಉಪಚುನಾವಣೆ ಮೂಂದೂಡಲಿಲ್ಲವೇಕೆ ಮತ್ತು ದಾಮೋಹ್‌ ದಲ್ಲಿ ಏಕೆ ಲಾಕ್ ಡೌನ್ ವಿಧಿಸಲಿಲ್ಲವೇಕೆ? “ಜನರ ಜೀವನಕ್ಕಿಂತ ಉಪಚುನಾವಣೆ ಮುಖ್ಯವಾಯಿತೇ?’ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...