Homeಮುಖಪುಟರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ತಡೆಯಲು ಕೋವಿಡ್ ಹೆಸರು ಬಳಸಲಾಗುತ್ತಿದೆ: ವಿಪಕ್ಷಗಳ ಖಂಡನೆ

ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ತಡೆಯಲು ಕೋವಿಡ್ ಹೆಸರು ಬಳಸಲಾಗುತ್ತಿದೆ: ವಿಪಕ್ಷಗಳ ಖಂಡನೆ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ತಡೆಯಲು ಕೋವಿಡ್ ಹೆಸರು ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಮತ್ತು ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.

“ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಬೇಕು. ಪ್ರೊಟೊಕಾಲ್‌ ಅನುಸರಿಸುತ್ತಿಲ್ಲವಾದರೆ ರಾಷ್ಟ್ರೀಯ ಹಿತಾಸಕ್ತಿಯ ಕಾರಣದಿಂದ ಯಾತ್ರೆಯನ್ನು ನಿಲ್ಲಿಸಬೇಕು” ಎಂದು ಕೇಂದ್ರ ಆರೋಗ್ಯ ಸಚಿವರ ಮನ್ಸುಖ್ ಮಾಂಡವಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಜೈರಾಂ ರಮೇಶ್, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದು ಟೀಕಿಸಿದ್ದಾರೆ.

ಇನ್ನೊಂದೆಡೆ ಸಾಮ್ನಾ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. “ಭಾರತ್ ಜೋಡೋ’ ಯಾತ್ರೆಯ ಯಶಸ್ಸಿನಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಭೀತಿ ಸರಿಯಾಗಿದೆ. ಆದರೆ ಮೂರು ವರ್ಷಗಳ ಹಿಂದೆ ಕೊರೊನಾ ವಿನಾಶವನ್ನುಂಟುಮಾಡಿದಾಗ ಅಂದಿನ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಗುಜರಾತ್‌ಗೆ ಆಹ್ವಾನಿಸಿ, ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದು ನೀವೇ” ಎಂದು ಕಿಡಿಕಾರಿದೆ.

“ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಯಾತ್ರೆಗಳನ್ನು ನಡೆಸುತ್ತಿದೆ. ಆರೋಗ್ಯ ಸಚಿವರು ಅವರಿಗೆ ಪತ್ರ ಕಳುಹಿಸಿದ್ದಾರೆಯೇ? ದಯವಿಟ್ಟು ಕೋವಿಡ್ ಪ್ರೋಟೋಕಾಲ್‌ಗಳನ್ನು ಪ್ರಕಟಿಸಿ. ನಾವು ಅವುಗಳನ್ನು ಅನುಸರಿಸುತ್ತೇವೆ” ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿಳಿಸಿದ್ದಾರೆ.

ಈ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ದೃಷ್ಟಿಯಿಂದ ಮತ್ತು ಕೋವಿಡ್ ಸಾಂಕ್ರಾಮಿಕ ರೋಗದ ಸಮಸ್ಯೆ ದೇಶದಲ್ಲಿ ಉಂಟಾಗದಂತೆ, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಮುಂದೂಡುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಆರೋಗ್ಯ ಸಚಿವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ; ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್‌ ಗಾಂಧಿಗೆ ಕೇಂದ್ರ ಸಚಿವರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...