Homeಕರೋನಾ ತಲ್ಲಣಫೆಬ್ರವರಿ ಒಳಗೆ ಕಡಿಮೆಯಾಗಲಿದೆ ಸೋಂಕು- ಕೊರೊನಾ ತಜ್ಞರ ಸಮಿತಿ!

ಫೆಬ್ರವರಿ ಒಳಗೆ ಕಡಿಮೆಯಾಗಲಿದೆ ಸೋಂಕು- ಕೊರೊನಾ ತಜ್ಞರ ಸಮಿತಿ!

ಕೊರೊನಾ ಮುನ್ನೆಚ್ಚರಿಕೆಗಳನ್ನು ಅನುಸರಿಸದಿದ್ದರೆ, ಸಾಮಾಜಿಕ ಅಂತರ, ಮಾಸ್ಕ್‌ಗಳ ಬಳಕೆ ನಿಲ್ಲಿಸಿದರೆ, ಒಂದೇ ತಿಂಗಳಲ್ಲಿ ಕೊರೊನಾ ಪ್ರಕರಣಗಳು 2.6 ದಶಲಕ್ಷ ಸೋಂಕುಗಳವರೆಗೆ ಹೆಚ್ಚಾಗಬಹುದು ಎಂದು ಸಮಿತಿ ಎಚ್ಚರಿಸಿದೆ.

- Advertisement -
- Advertisement -

ಕೊರೊನಾ ಸೋಂಕಿತರ ಪಟ್ಟಿಯಲ್ಲಿ ವಿಶ್ವದಲ್ಲಿ 2ನೇ ಸ್ಥಾನದಲ್ಲಿರುವ ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಿನೇ ದಿನೇ ಕಡಿಮೆಯಾಗುತ್ತಿದ್ದು, 2021ರ ಫೆಬ್ರವರಿ ಒಳಗೆ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕನಿಷ್ಠ ಕೆಳ ಮಟ್ಟಕ್ಕೆ ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಮಿತಿ ತಿಳಿಸಿದೆ.

ಸೆಪ್ಟೆಂಬರ್ ಮಧ್ಯದಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗುತ್ತಿದ್ದವು. ನಂತರ ಕೊವೀಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದು, ಪ್ರತಿದಿನ ಸರಾಸರಿ 61,390 ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ರಾಯಿಟರ್ಸ್ ಲೆಕ್ಕಾಚಾರ ಹಾಕಿದೆ.

“ನಮ್ಮ ಪ್ರಕಾರ ಪ್ರಸ್ತುತ ಜನಸಂಖ್ಯೆಯ ಸುಮಾರು 30% ರಷ್ಟು ಜನ ಸೋಂಕಿಗೆ ಒಳಗಾಗಿದ್ದಾರೆ. ಇದು ಫೆಬ್ರವರಿ ವೇಳೆಗೆ ಇದು 50% ವರೆಗೆ ಹೋಗಬಹುದು” ಎಂದು ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿಯ ಪ್ರಾಧ್ಯಾಪಕ ಮತ್ತು ಸಮಿತಿಯ ಸದಸ್ಯ ಮನೀಂದ್ರ ಅಗ್ರವಾಲ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ಐಐಟಿ ಹೈದರಬಾದ್​​ನ ಪ್ರಾಧ್ಯಾಪಕ ಎಂ. ವಿದ್ಯಾಸಾಗರ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು 10 ಸದಸ್ಯರ ಸಮಿತಿಯನ್ನು ಕೊರೊನಾ ಹರಡುವಿಕೆಯ ಅಧ್ಯಯನಕ್ಕೆ ನೇಮಿಸಿತ್ತು.

ಕೊರೊನಾ ಮುನ್ನೆಚ್ಚರಿಕೆಗಳನ್ನು ಅನುಸರಿಸದಿದ್ದರೆ, ಸಾಮಾಜಿಕ ಅಂತರ, ಮಾಸ್ಕ್‌ಗಳ ಬಳಕೆ ನಿಲ್ಲಿಸಿದರೆ, ಒಂದೇ ತಿಂಗಳಲ್ಲಿ ಕೊರೊನಾ ಪ್ರಕರಣಗಳು 2.6 ದಶಲಕ್ಷ ಸೋಂಕುಗಳವರೆಗೆ ಹೆಚ್ಚಾಗಬಹುದು ಎಂದು ಸಮಿತಿ ಎಚ್ಚರಿಸಿದೆ.

ರಜಾದಿನಗಳು ಹತ್ತಿರವಾಗುತ್ತಿದ್ದಂತೆ ದೇಶದಲ್ಲಿ ಸೋಂಕುಗಳ ಪ್ರಮಾಣ ಕೂಡ ಹೆಚ್ಚಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ದಸರಾ, ದುರ್ಗಾ ಪೂಜೆ ಮತ್ತು ದೀಪಾವಳಿ ಹಬ್ಬಗಳ ಆಚರಣೆಗಳು ಆರಂಭವಾಗಿದ್ದು, ಕೊರೊನಾ ನಿಯಮಾವಳಿಗಳನ್ನು ಮರೆಯಬಾರದು ಎಂದಿದ್ದಾರೆ.

ಭಾರತದಲ್ಲಿ ಸೆಪ್ಟೆಂಬರ್‌ನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷಕ್ಕಿಂತಲೂ ಅಧಿಕವಿತ್ತು. ಅಕ್ಟೋಬರ್ ಎರಡನೇ ವಾರದ ವೇಳೆಗೆ ಸರಾಸರಿ ಸಂಖ್ಯೆ 9 ಲಕ್ಷಕ್ಕಿಂತಲೂ ಕಡಿಮೆಗೆ ಇಳಿದಿತ್ತು. ಈಗ ಎರಡು ದಿನಗಳಿಂದ 8 ಲಕ್ಷಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಕೊರೊನಾ ನಿರ್ವಹಣೆಯಲ್ಲಿ ಭಾರತಕ್ಕಿಂತ ಪಾಕ್, ಅಫ್ಘಾನಿಸ್ತಾನ ಉತ್ತಮ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...