Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...