Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...