Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...