Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...