Homeಕರೋನಾ ತಲ್ಲಣಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

ಕೋವಿಡ್ ಕಾಲ: ಕೇರಳದ ಬೀಡಿ ಕಾರ್ಮಿಕರೊಬ್ಬರಿಂದ ಸಿಎಂ ಫಂಡ್‌ಗೆ 2 ಲಕ್ಷ ರೂ. ದೇಣಿಗೆ

- Advertisement -
- Advertisement -

ಕೇರಳದ ಕಣ್ಣೂರು ಜಿಲ್ಲೆಯ ಬೀಡಿ ಕೆಲಸಗಾರರೊಬ್ಬರು ತಮ್ಮ ಇಡೀ ಜೀವಮಾನದ ಉಳಿತಾಯವನ್ನು ಮುಖ್ಯಮಂತ್ರಿಯ ವಿಪತ್ತು ಪರಿಹಾರ ನಿಧಿಗೆ (ಸಿಎಂಡಿಆರ್‌ಎಫ್) ದಾನ ಮಾಡಿ ಅಪರೂಪದ ಮಾನವೀಯತೆ ಮೆರೆದಿದ್ದಾರೆ. ಆ ಹಣವನ್ನು ಕೋವಿಡ್ ರೋಗಿಗಳ ಆರೈಕೆಗೆ ಬಳಸಲು ಅವರು ವಿನಂತಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜೀವನಕ್ಕಾಗಿ ಬೀಡಿ ಕಟ್ಟುವ ಅವರಿಗೆ ಎರಡೂ ಕಿವಿ ಕೇಳಿಸವು. ಇವರು ಕಳೆದ ವಾರ ತನ್ನ ಉಳಿತಾಯ ಖಾತೆಯಿಂದ 2 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡುವ ಉದ್ದೇಶದಿಂದ ತನ್ನ ಬ್ಯಾಂಕಿನ ಸ್ಥಳೀಯ ಶಾಖೆ ತಲುಪಿದಾಗ, ಬ್ಯಾಂಕ್ ಅಧಿಕಾರಿ, ನಿಮಗೆ ಉಳಿಯುವುದು 850 ರೂ. ಮಾತ್ರ. ಜೀವನಕ್ಕೆ ಕಷ್ಟ ಆಗುವುದಿಲ್ಲವೆ? ಎಂದಿದ್ದಾರೆ.

‘ನನಗೆ ಕೆಲಸವಿದೆ. ರಾಜ್ಯ ಸರ್ಕಾರದಿಂದ ಮಾಸಿಕ ಪಿಂಚಣಿ ಬರುತ್ತದೆ ಅಷ್ಟು ಸಾಕು. ರಾಜ್ಯದ ತನ್ನ ಸಹೋದರ ಸಹೋದರಿಯರ ಪ್ರಾಣ ಉಳಿಸುವುದಕ್ಕಿಂತ ಅವರ ಜೀವನದ ಉಳಿತಾಯ ದೊಡ್ಡದಲ್ಲ ಎಂದು ಅವರು ಹೇಳಿದ್ದಾರೆ. ಆ ಬ್ಯಾಂಕ್ ಅಧಿಕಾರಿ ಈ ಘಟನೆಯನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ದಾನಿಯ ಕೋರಿಕೆಯಂತೆ ಅವರ ವಿವರ ನೀಡಿರಲಿಲ್ಲ. ಇದು ಅನೇಕರು ಆ ಅನಾಮಧೇಯ ದಾನಿಯನ್ನು ಹುಡುಕುವಂತೆ ಮಾಡಿತು.

ಈ ವಾರ ಸ್ಥಳೀಯ ಟೆಲಿವಿಷನ್ ನೆಟ್ವರ್ಕ್ ಮೀಡಿಯಾ ಒನ್ ಈ ವ್ಯಕ್ತಿಯನ್ನು ಕಣ್ಣೂರು ಜಿಲ್ಲೆಯ ಕುರುವಾ ಮೂಲದ ಜನಾರ್ಧನನ್ ಎಂದು ಗುರುತಿಸಿದೆ.

‘ಲಸಿಕೆಯನ್ನು ರಾಜ್ಯಕ್ಕೆ 400 ರೂ.ಗೆ ಮಾರಾಟ ಮಾಡಲಾಗುವುದು ಎಂದು ಗೊತ್ತಾದಾಗ ಅದು ರಾಜ್ಯ ಸರ್ಕಾರಕ್ಕೆ ದೊಡ್ಡ ಹೊರೆಯಾಗಿದೆ ಅನಿಸಿತು. ಆ ರಾತ್ರಿ, ನನಗೆ ನಿದ್ರೆ ಬರಲಿಲ್ಲ. ಮರುದಿನ ನಾನು ಬ್ಯಾಂಕಿಗೆ ಹೋದೆ. ಹಣವನ್ನು ದಾನ ಮಾಡಿದ ನಂತರವೇ ನನಗೆ ನಿರಾಳವಾಯಿತು” ಎಂದು ಜನಾರ್ಧನನ್ ಮೀಡಿಯಾ ಒನ್‌ಗೆ ತಿಳಿಸಿದ್ದಾರೆ.

‘ಇಷ್ಟು ಹಣವನ್ನು ಸಂಗ್ರಹಿಸಿ ಇಡುವುದರಿಂದ ಏನು ಪ್ರಯೋಜನ? ಜನರ ಜೀವನವು ದೊಡ್ಡದಾಗಿದೆ. ಜೀವನವಿದ್ದಾಗ ಮಾತ್ರ ಆಡಳಿತ ಮತ್ತು ವ್ಯವಸ್ಥೆ ಇರಲು ಸಾಧ್ಯ’ ಎಂದೂ ಅವರು ಹೇಳಿದ್ದಾರೆ.

13 ನೇ ವಯಸ್ಸಿನಿಂದ ಬೀಡಿ ಕಟ್ಟುವ ಕೆಲಸ ಮಾಡುವ ಜನಾರ್ಧನನ್ ಅವರಿಗೆ ಇಬ್ಬರು ಮದುವೆಯಾದ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಕಳೆದ ವರ್ಷ ನಿಧನರಾಗಿದ್ದಾರೆ. ಪ್ರಚಾರ ಒಲ್ಲದ ಅವರು ‘ಗೌಪ್ಯತೆಯೊಂದಿಗೆ ಏಕಾಂತ ಜೀವನ’ ನಡೆಸಲು ಇಚ್ಛಿಸಿದ್ದಾರೆ. ಆದ್ದರಿಂದ ಅವರ ದಾನ ಕಾರ್ಯದ ಬಗ್ಗೆ ಯಾರಿಗೂ ತಿಳಿಯಬಾರದು ಎಂದು ಹೇಳಿದರು.

ಸಿಎಂ ಪಿಣರಾಯಿ ವಿಜಯನ್, ಪತ್ರಿಕಾಗೋಷ್ಠಿಯಲ್ಲಿ, ಜನಾರ್ಥನನ್ ಅವರ ಹೆಸರನ್ನು ಹೇಳದೆ ಅವರ ಕಾರ್ಯವನ್ನು ಶ್ಲಾಘಿಸಿದರು, ಇದು ರಾಜ್ಯದ ಜನರ ಭಾವನೆಗಳನ್ನು ಒತ್ತಿ ಹೇಳುತ್ತದೆ ಎಂದು ಹೇಳಿದರು.

ಕಳೆದ ವಾರದಿಂದ ಕೇರಳದಲ್ಲಿ ಬಹಳಷ್ಟು ಜನರು ಕೋವಿಡ್ ಬಿಕ್ಕಟ್ಟು ಶಮನಕ್ಕೆ ಸ್ವ ಇಚ್ಛೆಯಿಂದ ಸಿಎಂ ಫಂಡ್‌ಗೆ ಹಣ ನೀಡುತ್ತಿರುವ ವರದಿಗಳು ಬಂದಿವೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...