Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...