Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...