Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....