Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...