Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...