Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...