Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....