Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...