Homeಮುಖಪುಟಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು...?

ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

- Advertisement -
- Advertisement -

ಕೊರೊನಾ ಲಸಿಕೆ ಬಳಿಕ ಕೋವಿಡ್ ಮಾತ್ರೆಗಳ ಬಗ್ಗೆ ದೇಶದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾತ್ರೆಗಳ ಉಪಯುಕ್ತತೆ ಬಗ್ಗೆಯೂ ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೊರೊನಾ ಸೋಂಕನ್ನು ನಿಭಾಯಿಸಲು ಕೋವಿಡ್‌ ಮಾತ್ರೆಗಳು ಉಪಯುಕ್ತ ಎಂದು ಹೇಳಲಾಗುತ್ತಿದ್ದರೂ, ಅವುಗಳ ಬಗ್ಗೆ ಆರೋಗ್ಯ ತಜ್ಞರು ಸಂಶಯ ಹೊಂದಿದ್ದಾರೆ.

ಸದ್ಯ, ಫೈಜರ್‌ ಕಂಪನಿಯ ಪ್ಯಾಕ್ಸಾಲೋವಿಡ್‌ ಮತ್ತು ಮೆರ್ಕ್‌ನ ಮೊಲ್ನುಪಿರಾವಿರ್ ಮಾತ್ರಗಳು ಕೊರೊನಾ ಚಿಕಿತ್ಸೆಗೆ ಆಂಟಿವೈರಲ್ ಔಷಧಿಗಳಾಗಿವೆ. ಇವುಗಳನ್ನು, ರೋಗಿಗಳು ಮನೆಯಲ್ಲಿಯೇ ತೆಗೆದುಕೊಳ್ಳಬಹುದು ಎಂದು ಕಂಪನಿಗಳು ಹೇಳಿವೆ.

ಕೊರೊನಾ ಸೋಂಕು ಹಿಡಿತಕ್ಕೆ ಬರುವ ಮೊದಲು, ಹೆಚ್ಚು ಪರಿಣಾಮಕಾರಿಯಾಗಿರಲು ಆಂಟಿವೈರಲ್‌ಗಳನ್ನು ಸಾಧ್ಯವಾದಷ್ಟು ಬೇಗ ನೀಡಬೇಕಾಗುತ್ತದೆ. ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬಳಸುವ ಮೊನೊಕ್ಲೋನಲ್ ಮಾತ್ರೆಗಳು ಆಂಟಿಬಾಡೀಸ್‌ಗಳಂತೆಯೇ ಈ ಮಾತ್ರೆಗಳು ಕಾರ್ಯವಹಿಸುತ್ತವೆ. ಆಂಟಿಬಾಡೀಸ್‌ಗಳನ್ನು ಈಗ IV ದ್ರವದ ರೂಪದಲ್ಲಿ ಬಳಸಲಾಗುತ್ತಿದ್ದು, ಇದನ್ನು ಪಡೆಯಲು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಇದು ದುಬಾರಿ ಕೂಡ. ಸೋಂಕು ದೃಢಪಟ್ಟ ಅಥವಾ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಮೊದಲ ದಿನಗಳಲ್ಲೇ ಕೋವಿಡ್ ಮಾತ್ರೆಗಳನ್ನು ತೆಗೆದುಕೊಂಡರೆ, ದೇಹದಲ್ಲಿ ಸೋಂಕಿನ ಉಲ್ಬಣವನ್ನು ತಡೆಯಬಹುದು ಮತ್ತು ಆಸ್ಪತ್ರೆಗೆ ಸೇರುವುದನ್ನು ತಡೆಯಬಹುದು ಎಂದು ಕಂಪನಿಗಳು ಹೇಳಿವೆ. 

‘ಮಾತ್ರೆಗಳಿಂದ ವೈರಸ್‌ನ ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡಬಹುದು’ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ.ಅನುಪ್ ಆರ್ ವಾರಿಯರ್ ಹೇಳಿದ್ದಾರೆ. ಯುಕೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಅನುಮೋದಿಸಲಾದ ಮೊದಲ ಕೋವಿಡ್ ವಿರೋಧಿ ಮಾತ್ರೆಯಾಗಿರುವ ಮೊಲ್ನುಪಿರಾವಿರ್‌ನ ಕ್ಲಿನಿಕಲ್ ಡೇಟಾವನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಪರಿಶೀಲಿಸುತ್ತಿದೆ.

ಇದನ್ನೂ ಓದಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ಪ್ರಸ್ತುತ, ಕೊರೊನಾ ಮಾತ್ರೆಗಳ ಬಳಕೆಯನ್ನು ಅನುಮೋದಿಸುವ ಏಕೈಕ ರಾಷ್ಟ್ರ ಬ್ರಿಟನ್. ಕೋವಿಡ್‌ನ ಆಂಟಿವೈರಲ್ ಮಾತ್ರೆಯು ಆಸ್ಪತ್ರೆಗೆ ದಾಖಲಾಗುವ ಮತ್ತು ಸಾವಿನ ಪ್ರಮಾಣವನ್ನು ಸುಮಾರು 90% ರಷ್ಟು ಕಡಿತಗೊಳಿಸಿದೆ ಎಂದು ಫಿಜರ್ ಕಂಪನಿ ಹೇಳಿಕೊಂಡಿದೆ. ಆದರೆ, ಇಲ್ಲಿಯವರೆಗೂ ಕಂಪನಿಗಳು ನಡೆಸಿದ ಪ್ರಯೋಗಗಳ ಸಂಪೂರ್ಣ ಡೇಟಾವನ್ನು ಇನ್ನೂ ಪ್ರಕಟಿಸಿಲ್ಲ.

“ಹೀಗಾಗಿ ಈ ಹಂತದಲ್ಲಿ, ನಾವು ಮಾತ್ರೆಗಳನ್ನು ಸಂಪೂರ್ಣವಾಗಿ ಅವಲಂಬಿಸಲಾಗುವುದಿಲ್ಲ. ಮಾತ್ರೆಗಳು HIV ಔಷಧಿಗಳಂತೆಯೇ ಇರುತ್ತವೆ. ಆದ್ದರಿಂದ, ಯಕೃತ್ತಿ (ಲಿವರ್‌)ನ ಅಪಸಾಮಾನ್ಯ ಕ್ರಿಯೆಯನ್ನು ನಾವು ಮೇಲ್ವಿಚಾರಣೆ ಮಾಡಬೇಕಾಗಬಹುದು. ಏಕೆಂದರೆ, ಇವುಗಳು ಅಂಗಾಂಗಗಳ ಮೇಲೆ ಸೌಮ್ಯವಾದ ಪರಿಣಾಮವನ್ನು ಬೀರುತ್ತವೆ. ಹೀಗಾಗಿ, ಇದು ಗೇಮ್ ಚೇಂಜರ್ ಎಂದು ನಾವು ನಂಬುವುದಿಲ್ಲ” ಎಂದು ಕೊಚ್ಚಿ ಮೂಲದ ಶ್ವಾಸಕೋಶ ಶಾಸ್ತ್ರಜ್ಞ ಡಾ.ಮೋನು ವರ್ಗೀಸ್ ಹೇಳಿದ್ದಾರೆ.

ಈ ಹಿಂದೆ, ಲೋಪಿನಾವಿರ್ ಮತ್ತು ರಿಟೊನಾವಿರ್ – ಎಚ್‌ಐವಿ ಚಿಕಿತ್ಸೆಗಾಗಿ ಬಳಸಲಾಗುವ ಆಂಟಿವೈರಲ್ ಔಷಧಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿತ್ತು. ಆದರೆ, ಅದು ಪರಿಣಾಮಕಾರಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬೂಸ್ಟರ್ ಡೋಸ್‌ಗಳು ಮತ್ತು ಕೋವಿಡ್ ಮಾತ್ರೆಗಳಿಗಿಂತ ಹೆಚ್ಚಾಗಿ ನಾವು ಕೋವಿಡ್ ವ್ಯಾಕ್ಸಿನೇಷನ್‌ಗೆ ಹೆಚ್ಚಿನ ಆದ್ಯತೆ ನೀಡಬೇಕು. ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದವರಿಗೆ ಸಂಪೂರ್ಣವಾಗಿ ಲಸಿಕೆ ಹಾಕಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಸಿಕೆ ಅಭಿಯಾನಗಳನ್ನು ಮತ್ತು ಕ್ರಮಗಳನ್ನು ತಳಮಟ್ಟದಿಂದಲೇ ಬಲಪಡಿಸಬೇಕು. ಬಹುಶಃ, ದೀರ್ಘಾವಧಿಯಲ್ಲಿ ಮಾತ್ರೆಗಳು ಪ್ರಮುಖ ಪಾತ್ರವನ್ನು ವಹಿಸಬಹುದು. ಏಕೆಂದರೆ, ಭವಿಷ್ಯದಲ್ಲಿ ಇದು ಅಗ್ಗವಾಗಬಹುದು ಮತ್ತು ಸುಲಭವಾಗಿ ದೊರೆಯಬಹುದು” ಎಂದು ಡಾ. ಮೋನು ವರ್ಗೀಸ್‌ ತಿಳಿಸಿದ್ದಾರೆ.

 ಇನ್ನು, ಈ ಔಷಧಿಗಳು ಕೋವಿಡ್ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ನಂಬುವ ತಜ್ಞರೂ ಇದ್ದಾರೆ. ವಿಶೇಷವಾಗಿ, ಸೋಂಕಿನ ಆರಂಭಿಕ ಹಂತಗಳಲ್ಲಿ ಹೆಚ್ಚಿನ ಅಪಾಯದಲ್ಲಿರುವವರು, “ಕೋವಿಡ್ ಅನೇಕರ ಜೀವನವನ್ನು ಕಾಡುತ್ತಲೇ ಇದೆ. ಕೋವಿಡ್‌ ವಿರುದ್ದ ನೀಡಲಾಗುತ್ತಿರುವ ಲಸಿಕೆಗಳ ಜೊತೆಗೆ ಬೂಸ್ಟರ್ ಡೋಸ್‌ಗಳು ಮೂರನೇ ಅಲೆಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಬಹುದು” ಎಂದು ಹೇಳುತ್ತಾರೆ.


ಇದನ್ನೂ ಓದಿ: ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...