Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...