Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...