Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...