Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...