Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...