Homeಮುಖಪುಟಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೈನಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿದಿನ 3 ಲಕ್ಷ ದಾಟುತ್ತಿದೆ. ಬೆಡ್ ಸಿಗದೆ, ಆಕ್ಸಿಜನ್ ಇಲ್ಲದೆ ಬಡವರು ಮತ್ತು ಮಧ್ಯಮವರ್ಗ ಅಸಹಾಯಕತೆಯಲ್ಲಿ ಆಸ್ಪತ್ರೆಗಳ ಮುಂದೆ, ಚಿತಾಗಾರಗಳಲ್ಲಿ ಕಾಯುತ್ತಿವೆ. ಆದರೆ ಕಳೆದ ವಾರದಿಂದ ಈ ದೇಶದ ನೂರಾರು ಅತಿ ಶ್ರೀಮಂತರು ಖಾಸಗಿ ವಿಮಾನಗಳನ್ನು ಬುಕ್ ಮಾಡಿ ವಿದೇಶಗಳಿಗೆ ಸದ್ದಿಲ್ಲದೇ ಪಲಾಯನ ಮಾಡುತ್ತಿದ್ದಾರೆ ಎಂದು ಬ್ಯುಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.

ವಿವಿಧ ದೇಶಗಳು ಪ್ರಯಾಣ ನಿರ್ಬಂಧ ಹೇರುತ್ತಿರುವುದರಿಂದ ಅವಸರವಸರದಲ್ಲಿ ಈ ಸೂಪರ್ ಸಿರಿವಂತರು ಯಥೇಚ್ಛ ಹಣ ನೀಡಿ ಖಾಸಗಿ ಜೆಟ್‌ಗಳ ಮೂಲಕ ಸುರಕ್ಷಿತ ತಾಣಗಳನ್ನು ಸೇರುತ್ತಿದ್ದಾರೆ.

ಯುನೈಟೆಡ್ ಅರಬ್ ಸಂಸ್ಥಾನವು (ಯುಎಇ) ಹೋಲಿಕೆಯಲ್ಲಿ ಭಾರತಕ್ಕೆ ಸಮೀಪ ಇರುವುದರಿಂದ ಮತ್ತು ಅಲ್ಲಿ ಸುರಕ್ಷತೆಯೂ ಇರುವುದರಿಂದ ಬಹುತೇಕರ ಫೇವರಿಟ್ ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಅಲ್ಲಿ ಅವರು ದುಬಾರಿ ಹಣ ಕೊಟ್ಟು ವ್ಯಾಕ್ಸಿನ್ ಪ್ಲಸ್ ವೆಕೇಷನ್ (ಲಸಿಕೆ ಮತ್ತು ರಜಾದಿನಗಳು) ಎರಡನ್ನು ಪಡೆಯುತ್ತಿದ್ದಾರೆ.

ಏಪ್ರಿಲ್ 25ರಿಂದ 10 ದಿನಗಳ ಕಾಲ ಭಾರತದಿಂದ ಪ್ರಯಾಣ ನಿರ್ಬಂಧ ವಿಧಿಸುವುದಾಗಿ ಯುಎಇ ಕಳೆದ ವಾರ ಘೋಷಿಸಿದ ನಂತರ ಈ ಸುಪರ್ ಸಿರಿವಂತರು ಎದ್ದು ಬಿದ್ದು ಖಾಸಗಿ ವಿಮಾನ, ಜೆಟ್‌ಗಳನ್ನು ಬುಕ್ ಮಾಡಿ ಹಾರಿ ಹೋಗಿದ್ದಾರೆ.

ಶುಕ್ರವಾರ ಈ ಕುರಿತು ಮಾತನಾಡಿರುವ ಖಾಸಗಿ ಚಾರ್ಟರ್ ಕಂಪನಿ ‘ಏರ್ ಚಾರ್ಟರ್’ ಅಧಿಕಾರಿ, ನಾಳೆ (ಶನಿವಾರ ಏಪ್ರಿಲ್ 24) ನಮ್ಮ ಕಂಪನಿಯಿಂದ 12 ವಿಮಾನಗಳು ದುಬೈಗೆ ಹೊರಡಲಿದ್ದು ಎಲ್ಲವೂ ಭರ್ತಿಯಾಗಿವೆ’ ಎಂದು ತಿಳಿಸಿದ್ದಾರೆ.

ಇನ್ನೊಂದು ಖಾಸಗಿ ಕಂಪನಿ ಎಂಥ್ರಾಲ್ ಏವಿಯೇಷನ್, ನೂರಾರು ಬುಕಿಂಗ್ ಬೇಡಿಕೆಗಳು ಕಳೆದ ಹಲವು ದಿನಗಳಿಂದ ಬಂದಿವೆ ಎಂದಿದೆ.

ಏಪ್ರಿಲ್ 25ರ ನಿರ್ಬಂಧಕ್ಕೂ ಮುಂಚೆ ನೂರಾರು ಸುಪರ್ ಸಿರಿವಂತರು ದುಬೈ ಸೇರಿದ್ದಾರೆ. ಈಗ ಮತ್ತೆಲ್ಲಿ ನಿರ್ಬಂಧವಿಲ್ಲವೋ ಅಂತಹ ಕಡೆ ಖಾಸಗಿ ಜೆಟ್‌ಗಳ ಮೂಲಕ ಹಾರಲು ತಯಾರಿ ನಡೆಸಿದ್ದಾರೆ.

ಮುಂಬೈನಿಂದ ದುಬೈಗೆ 13 ಸೀಟುಗಳ ಜೆಟ್ ಬಾಡಿಗೆ 38 ಸಾವಿರ ಡಾಲರ್! 6 ಸೀಟಿನದ್ದಾರೆ 33 ಸಾವಿರ ಡಾಲರ್ ತೆರಬೇಕಾಗಿದೆ ಎನ್ನಲಾಗಿದೆ.

ಥೈಲ್ಯಾಂಡ್‌ಗೂ ಅನೇಕರು ಪಲಾಯನ ಮಾಡಿದ್ದರೆ. ಸಂಡೇ ಟೈಮ್ಸ್ ಪ್ರಕಾರ, ಹಲವು ದಿನಗಳ ಮೊದಲೇ ಕೆಲವರು ದುಬಾರಿ ದರ ತೆತ್ತು (9 ತಾಸಿನ ಪ್ರಯಾಣಕ್ಕೆ 100 ಸಾವಿರ ಪೌಂಡ್ ಬಾಡಿಗೆ) ಬ್ರಿಟನ್‌ಗೆ ಓಡಿದ್ದಾರೆ. ಇವರೆಲ್ಲ ತಮ್ಮದೇ ಗುಂಪು ರಚಿಸಿಕೊಂಡ ವಿಮಾನ ಅಥವಾ ಜೆಟ್ ಬಾಡಿಗೆ ಪಡೆದು ಹಾರಿದ್ದಾರೆ.

ಈಗ ಪ್ರಯಾಣ ನಿರ್ಬಂಧ ಹೇರದ ಯಾವುದಾದರೂ ಸುರಕ್ಷಿತ ತಾಣವನ್ನು ಸುಪರ್ ಸಿರಿವಂತರು ಹುಡುಕುತಿದ್ದಾರೆ ಎನ್ನಲಾಗಿದೆ. ಕೋವಿಡ್ ಅಂತಲ್ಲ, ದೇಶದ ಕಷ್ಟಗಳಿಗೆ ಇವರೆಲ್ಲ ಸದಾ ಪಲಾಯನ ಹೇಳುತ್ತಲೇ ಬಂದವರು ಅಲ್ವೇ ಎಂಬ ಟೀಕೆ ಕೇಳಿಬಂದಿದೆ.

“ಹಣವಂತರ ಒಳಿತಿಗೇಂತ ಹಗಲಿರುಳು ದುಡಿದ್ರಪ್ಪ ಮೋದಿ. ಆದರೆ ಕೋವಿಡ್‌19 ಅನ್ನು ಹ್ಯಾಂಡಲ್‌ ಮಾಡಿದ ರೀತಿ ನೋಡಿ ಬೆಚ್ಚಿ ಬಿದ್ದಿರೋ ಹಣವಂತ್ರು, ಮೋದಿ ನಂಬಿಕೊಂಡ್ರೊ ಬದುಕ್ಕಲ್ಲ, ಈ ದೇಶದ ಸಾವಾಸ ಸಾಕು ಅಂತ ವಿದೇಶಕ್ಕೆ ಹಾರ್ತಾ ಇದ್ದಾರಂತೆ. ಹಿಂಗಿದೆ ಮೋದಿ ಆಡಳಿತ.. ನಮೋ ನಮಃ!” ಎಂದು ಪತ್ರಕರ್ತ ಕುಮಾರ್ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...