Homeಕರೋನಾ ತಲ್ಲಣಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಇಳಿಕೆಯಾಗುತ್ತಿದ್ದು, ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಆದರೆ, 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ಎಚ್ಚರಿಸಿದೆ.

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಇದಕ್ಕಾಗಿ ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಎಚ್ಚರಿಸಿದೆ.

ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ 16 ಸದಸ್ಯರನ್ನು ಒಳಗೊಂಡ ತಜ್ಞರ ಸಮಿತಿ ಕೊರೊನಾ 3ನೇ ಅಲೆಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ. 91 ಪುಟಗಳ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವ ಸಮಿತಿ, ಹಲವಾರು ಶಿಫಾರಸ್ಸುಗಳನ್ನು ಮಾಡಿದೆ.

ರಾಜ್ಯದಲ್ಲಿ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಿನಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣಿಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 0-18 ವರ್ಷ ವಯ್ಸಸಿನ 32.21 ಲಕ್ಷ ಮಕ್ಕಳಿದ್ದಾರೆ. ಈ ಪೈಕಿ, 45,958 ಮಕ್ಕಳು ಸೋಂಕಿಗೆ ತುತ್ತಾಗಲಿದ್ದಾರೆ. ರಾಜ್ಯದಾದ್ಯಂತ 0-18 ವರ್ಷ ವಯಸ್ಸಿನ 2.38 ಕೋಟಿ ಜನಸಂಖ್ಯೆಯಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಸಮಿತಿ ಅಂದಾಜಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ಬೆಂಗಳೂರಿನಲ್ಲಿ ಮಕ್ಕಳಿಗೆ 3,677 ಹಾಸಿಗೆಗಳ ಅವಶ್ಯಕತೆಯಿದೆ. ಅದರಲ್ಲಿ 1,838 ಐಸಿಯು ಮತ್ತು ಎಚ್‌ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಹಾಸಿಗೆಗಳು ಇರಬೇಕಾಗುತ್ತದೆ. ಅಲ್ಲದೆ, ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 7,353 ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಅಂದಾಜಿಸಲಾಗಿದೆ.

ಉಳಿದಂತೆ ರಾಜ್ಯಾದ್ಯಂತ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 27,205 ಹಾಸಿಗೆಗಳು, 13,602 ಐಸಿಯು ಹಾಗೂ 54,409 ಎಚ್‌ಡಿಯು ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಸೂಚಿಸಿದೆ. ಬಾಲ ಆರೈಕೆ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಸಲಹೆ ನೀಡಿದೆ.

ಸಮಿತಿ ವರದಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ತಜ್ಞರ ಸಮಿತಿ ಅಂತಿಮ ವರದಿ ಆಧರಿಸಿ 45 ದಿನಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯ ಆರಂಭದ ಒಂದು ತಿಂಗಳು ಇಡೀ ದೇಶವೇ ತತ್ತರಿಸಿ ಹೋಗಿತ್ತು. ಆಕ್ಸಿಜನ್‌, ಬೆಡ್ ಕೊರತೆಯಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡರು. ರಾಜ್ಯದಲ್ಲಿಯೂ ಬೆಡ್‌ಗ ಸಮಸ್ಯೆ ವಿಪರಿತವಾಗಿತ್ತು. ರಾಜಕೀಯ ಪಕ್ಷಗಳು ಕೊರೊನಾ ಬಿಕ್ಕಟ್ಟನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು ವಿಪರ್ಯಾಸ. ಸದ್ಯ ಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಎಂದು ತಜ್ಷರ ಸಮಿತಿ ಎಚ್ಚರಿಸಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆಯೇ ಕಾದು ನೋಡಬೇಕಿದೆ.


ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...