Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...