Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...