Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...