Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...