Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...