Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...