Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...