Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...