Homeಕರೋನಾ ತಲ್ಲಣ18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

18-44 ವರ್ಷದ ಲಸಿಕಾ ಅಭಿಯಾನ ತಾತ್ಕಾಲಿಕ ರದ್ದು: ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ.

- Advertisement -
- Advertisement -

ಹಲವು ಅಡೆತಡೆಗಳ ನಡುವೆ ಮೇ 1 ರಿಂದ ಆರಂಭವಾಗಿದ್ದ 18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಅಭಿಯಾನವನ್ನು ಮೇ 14 ರಿಂದ ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ. ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮೂರು ದಿನದ ಹಿಂದೆ ತಾನೇ ಆರೋಗ್ಯ ಸಚಿವ ಡಾ.ಸುಧಾಕರ್‌ರವರು ಟ್ವೀಟ್ ಮಾಡಿ “ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. ಹಲವು ಜಿಲ್ಲೆಗಳಲ್ಲಿಯೂ ಆರಂಭಿಸಲಾಗುವುದು” ಎಂದಿದ್ದರು.

ಆದರೆ ಇಂದು ಸರ್ಕಾರ ಲಸಿಕೆಯ ಕೊರತೆಯಿರುವುದರಿಂದ ಮೇ 14 ರಿಂದ ತಾತ್ಕಾಲಿಕವಾಗಿ 18-44 ವರ್ಷ ವಯೋಮಾನದವರಿಗೆ ಲಸಿಕೆ ರದ್ದುಮಾಡುತ್ತಿದ್ದೇವೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡುವುದು ನಮ್ಮ ಆದ್ಯತೆ ಎಂದು ತಿಳಿಸಿದೆ. ಕೋವಿನ್ ಆಪ್‌ನಲ್ಲಿ ನೊಂದಣಿ ಮಾಡಿಸಿಕೊಂಡವರಿಗೂ ಸಹ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಇದರಿಂದ ಜನರ ಆಕ್ರೋಶ ಭುಗಿಲೆದ್ದಿದೆ. ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ರಾಜ್ಯ ಸರ್ಕಾರವೇ ಲಸಿಕೆಯಿಲ್ಲ ಎಂದು ಕೈಚೆಲ್ಲಿದರೆ ಜನರೇನು ಮಾಡಬೇಕು? ಈಗ ಕೇಂದ್ರ ಸರ್ಕಾರ ಲಸಿಕೆ ಪೂರೈಸುತ್ತಿಲ್ಲ ಎಂದಿದ್ದಾರೆ. ಎರಡು ಕಡೆ ಒಂದೇ ಸರ್ಕಾರವಿದ್ದರೆ ಸ್ವರ್ಗವಾಗುತ್ತೆ ಎಂದಿದ್ದರು. ಆದರೆ ಜನರ ಬಾಳು ಈಗ ನರಕವಾಗಿದೆ. ಇವರ ಭಾಷೆಯಲ್ಲೇ ಹೇಳುವುದಾರೆ ರಾಜ್ಯದ 25 ಜನ BJP ಸಂಸದರಿಗೆ ಕೇಂದ್ರದ ಬಳಿ ಲಸಿಕೆ ಕೇಳಲು ಧಮ್ ಇಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಲಸಿಕೆ ಕೊಡುವ ಯೋಗ್ಯತೆ ಇಲ್ಲದಿದ್ದರೆ ಲಸಿಕಾ ಅಭಿಯಾನ ಘೋಷಣೆ ಮಾಡಿದ್ಯಾಕೆ? ಆರೋಗ್ಯ ಸಚಿವರು ಎಲ್ಲರಿಗೂ ಲಸಿಕೆ ಕೊಡುತ್ತೀವಿ ಎನ್ನುತ್ತಾರೆ. ಮುಖ್ಯಮಂತ್ರಿಗಳು ಲಸಿಕೆಗಾಗಿ ಬೊಬ್ಬೆ ಹೊಡೆಯಬೇಡಿ ಎನ್ನುತ್ತಾರೆ. ಇದೇನು ಜವಬ್ಧಾರಿಯುತ ಸರ್ಕಾರವೋ?ರಣಹೇಡಿ ಸರ್ಕಾರವೋ? ಈ ಸರ್ಕಾರ ರಾಜ್ಯದ ಜನರ ದೌರ್ಭಾಗ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ 18-44 ವರ್ಷದವರಿಗೆ ಲಸಿಕೆ ನಿಲ್ಲಿಸುವುದಾಗಿ ಘೋಷಿಸಿದೆ. ರಾತ್ರಿ ವೇಳೆಗೆ ಬೆಂಗಳೂರಿನಲ್ಲಿ ಕೇವಲ 15,000 ಲಸಿಕೆಗಳು ಮಾತ್ರ ಉಳಿದಿವೆ. 63 ಲಕ್ಷ ಜನರಿಗೆ 2 ನೇ ಡೋಸ್ ಅಗತ್ಯವಿದೆ, ಆದರೆ ಲಸಿಕೆ ಇಲ್ಲ. ಯಾರದರೂ ಈ ಲಸಿಕೆ ಕೊರತೆಯ ಪಟ್ಟಿಯನ್ನು ಸಂಸದ ತೇಜಸ್ವಿ ಸೂರ್ಯ ಕೊಟ್ಟು ಮೋದಿಗೆ ಓದಲು ಹೇಳುವಿರಾ ಎಂದು ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

18-44 ವಯಸ್ಸಿನವರಿಗೆ ಲಸಿಕೆ ಅಭಿಯಾನ ಮೇ 1 ರಿಂದ ಪ್ರಾರಂಭವಾಗುವುದಾಗಿ ಪಿಎಂ ಪ್ರಕಟಿಸಿದರು. ಸಿಎಂ ಮೇ 1 ರಂದು ಉದ್ಘಾಟನೆ ಮಾಡುತ್ತಾರೆ. ಆದರೆ ಎಲ್ಲಿಯೂ ಲಸಿಕೆ ಸರಬರಾಜು ಇಲ್ಲ. ಮೇ 10 ರಿಂದ ಮತ್ತೆ ಪುನರಾರಂಭ. ಈಗ ಮೇ 14 ರಿಂದ ಅಮಾನತುಗೊಳಿಸಲಾಗಿದೆ. ಇದು ಆಡಳಿತ ಅಥವಾ ತಮಾಷೆಯೊ? ಎಂದು ಶಾಸಕ ಕೃಷ್ಣಭೈರೇಗೌಡ ಕಿಡಿಕಾರಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಇಲ್ಲ!

18-44 ವಯಸ್ಸಿನವರಿಗೆ ಲಸಿಕೆ ಇಲ್ಲ ಮಾತ್ರವಲ್ಲದೇ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೂಡ ಲಸಿಕೆ ನೀಡಲಾಗುತ್ತಿಲ್ಲ. ತೀವ್ರ ಲಸಿಕೆಯ ಕೊರತೆಯಿಂದ ಅವರು ಸಹ ಕಾಯಬೇಕಾಗಿದೆ. ಈ ಕುರಿತು ಗದಗ ಜಿಲ್ಲಾ ಅರೋಗ್ಯ ಅಧಿಕಾರಿ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನಮ್ಮ ಆದ್ಯತೆಯಾಗಿರುವುದರಿಂದ ಹೊಸಬರಿಗೆ ಮೊದಲ ಡೋಸ್ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇಂದು ಕೂಡ ಲಸಿಕೆ ಇಲ್ಲದೆ ಹಲವು ಆಸ್ಪತ್ರೆಗಳು ಲಸಿಕೆ ನೀಡುವುದನ್ನು ನಿಲ್ಲಿಸಿವೆ. ಕೋವಿನ್ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡರೂ ಲಸಿಕೆ ಸಿಗದವರು ಸಮರ್ಪಕ ಯೋಜನೆ ಇಲ್ಲದ ಕಾರಣ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಸತತ ಮನವಿಗೆ ಸ್ಪಂದಿಸದ ಮೋದಿ, ಯೋಗಿ!: ಮೋದಿ ಅನುಯಾಯಿ, RSS ಕಾರ್ಯಕರ್ತ ಕೊವಿಡ್‌ಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...