Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...