Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...