Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...