Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....