Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...