Homeಮುಖಪುಟಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ...

ಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ ವಿರೋಧ

ಗೋವುಗಳ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ ಎಂದು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಪ್ರತಿ ಸರ್ಕಾರಿ ನೌಕರರು ವಾರ್ಷಿಕ 11,000 ರೂ ದೇಣಿಗೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಎ ಮತ್ತು ಬಿ ದರ್ಜೆಯ ನೌಕರರು ಪ್ರತಿ ವರ್ಷ 11,000 ರೂಗಳನ್ನು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಸಿಎಂರವರ ಮನವಿ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು, “ನಾವು ಒಂದು ಲಕ್ಷ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಬಹುತೇಕ ಎಲ್ಲಾ ನೌಕರರು ದೇಣಿಗೆ ನೀಡಲು ಒಪ್ಪಿದ್ದಾರೆ. ಕೆಲವು ಮಾನ್ಯತೆ ಪಡೆಯದ ಸಂಸ್ಥೆಗಳು ಮಾತ್ರ ವಿರೋಧಿಸುತ್ತಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸರ್ಕಾರಿ ನೌಕರರು 11,000 ರೂ ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರಾದ ಡಿ.ಶಿವಕುಮಾರ್‌ರವರು ತೀವ್ರವಾಗಿ ವಿರೋಧಿಸಿದ್ದಾರೆ. “ಯಾವುದೇ ದರ್ಜೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಇದುವರೆಗೂ ಸರ್ಕಾರದ ಜೊತೆಗೆ ನಿಂತಿದ್ದೇವೆ. ನೈಸರ್ಗಿಕ ವಿಪತ್ತುಗಳು ಎದುರಾದಾಗ ಎಲ್ಲರೂ ದೇಣಿಗೆ ನೀಡಿದ್ದೇವೆ. ಆದರೆ ಈ ಪುಣ್ಯಕೋಟಿ ದತ್ತು ಯೋಜನೆ ಸರ್ಕಾರದ್ದಾಗಿರುವುದರಿಂದ ಅದಕ್ಕೆ ಹಣ ಮೀಸಲಿಡಬೇಕಾದುದ್ದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದಿರುವಾಗ ಎಲ್ಲ ನೌಕರರು ಕಡ್ಡಾಯವಾಗಿ ದೇಣಿಗೆ ನೀಡಬೇಕೆಂಬುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

“ದೇಣಿಗೆ ನೀಡಿ ಗೋವುಗಳನ್ನು ದತ್ತು ಪಡೆಯುವುದು ಸರ್ಕಾರಿ ನೌಕರರ ಕೆಲಸವಲ್ಲ. ಅದರ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ. ಅದು ನಿಜವಾದ ರಾಷ್ಟ್ರನಿರ್ಮಾಣದ ಕೆಲಸ” ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇಂದು ಈ ಕುರಿತು ಸರ್ಕಾರಿ ನೌಕರರ ಸಭೆ ನಡೆಯುತ್ತಿದ್ದು, ದೇಣಿಗೆ ನೀಡಬೇಕೊ ಬೇಡವೊ ಎಂದು ತೀರ್ಮಾನವಾಗಲಿದೆ. ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...