Homeಮುಖಪುಟಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ...

ಗೋವು ದತ್ತು ಪಡೆವ ಪುಣ್ಯಕೋಟಿ ಯೋಜನೆ: ಪ್ರತಿ ಸರ್ಕಾರಿ ನೌಕರರಿಂದ 11,000 ರೂ ದೇಣಿಗೆ ವಸೂಲಿಗೆ ವಿರೋಧ

ಗೋವುಗಳ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ ಎಂದು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.

- Advertisement -
- Advertisement -

ಗೋವುಗಳನ್ನು ದತ್ತು ಪಡೆಯುವ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗಾಗಿ ಪ್ರತಿ ಸರ್ಕಾರಿ ನೌಕರರು ವಾರ್ಷಿಕ 11,000 ರೂ ದೇಣಿಗೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರು ತಿಳಿಸಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ತಿರಸ್ಕರಿಸಿದೆ.

ರಾಜ್ಯದ ಸರ್ಕಾರಿ ಮತ್ತು ಖಾಸಗೀ ಗೋಶಾಲೆಗಳಲ್ಲಿರುವ ಅಲ್ಲದೆ ವಯಸ್ಸಾದ, ಖಾಯಿಲೆಗೊಳಗಾದ, ತಪ್ಪಿಸಿಕೊಂಡ ಹಾಗೂ ಅಕ್ರಮ ಸಾಗಾಟದಲ್ಲಿ ವಶಕ್ಕೆ ಪಡೆದ ಗೋವುಗಳನ್ನು ಸಾಕುವುದಕ್ಕಾಗಿ ಕರ್ನಾಟಕ ಸರ್ಕಾರವು ಪುಣ್ಯಕೋಟಿ ದತ್ತು ಯೋಜನೆಯನ್ನು ಜಾರಿಗೆ ತಂದಿದೆ. ಚಿತ್ರನಟ ಸುದೀಪ್‌ರವರನ್ನು ರಾಯಭಾರಿಯನ್ನಾಗಿ ನೇಮಿಸಿದೆ. ಆದರೆ ಈ ಯೋಜನೆ ಜಾರಿಗೆ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದರಿಂದ ಸಿಎಂ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟಕ್ಕೆ ಪತ್ರ ಬರೆದು ಎ ಮತ್ತು ಬಿ ದರ್ಜೆಯ ನೌಕರರು ಪ್ರತಿ ವರ್ಷ 11,000 ರೂಗಳನ್ನು ದೇಣಿಗೆ ನೀಡಬೇಕೆಂದು ಮನವಿ ಮಾಡಿದ್ದರು.

ಸಿಎಂರವರ ಮನವಿ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ಷಡಕ್ಷರಿಯವರು, “ನಾವು ಒಂದು ಲಕ್ಷ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಬಹುತೇಕ ಎಲ್ಲಾ ನೌಕರರು ದೇಣಿಗೆ ನೀಡಲು ಒಪ್ಪಿದ್ದಾರೆ. ಕೆಲವು ಮಾನ್ಯತೆ ಪಡೆಯದ ಸಂಸ್ಥೆಗಳು ಮಾತ್ರ ವಿರೋಧಿಸುತ್ತಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸರ್ಕಾರಿ ನೌಕರರು 11,000 ರೂ ದೇಣಿಗೆ ನೀಡಬೇಕೆಂಬ ಪ್ರಸ್ತಾಪವನ್ನು ಪ.ಜಾ ಮತ್ತು ಪ.ಪಂಗಡ ನೌಕರರ ಸಂಘದ ಅಧ್ಯಕ್ಷರಾದ ಡಿ.ಶಿವಕುಮಾರ್‌ರವರು ತೀವ್ರವಾಗಿ ವಿರೋಧಿಸಿದ್ದಾರೆ. “ಯಾವುದೇ ದರ್ಜೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಇದುವರೆಗೂ ಸರ್ಕಾರದ ಜೊತೆಗೆ ನಿಂತಿದ್ದೇವೆ. ನೈಸರ್ಗಿಕ ವಿಪತ್ತುಗಳು ಎದುರಾದಾಗ ಎಲ್ಲರೂ ದೇಣಿಗೆ ನೀಡಿದ್ದೇವೆ. ಆದರೆ ಈ ಪುಣ್ಯಕೋಟಿ ದತ್ತು ಯೋಜನೆ ಸರ್ಕಾರದ್ದಾಗಿರುವುದರಿಂದ ಅದಕ್ಕೆ ಹಣ ಮೀಸಲಿಡಬೇಕಾದುದ್ದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದಿರುವಾಗ ಎಲ್ಲ ನೌಕರರು ಕಡ್ಡಾಯವಾಗಿ ದೇಣಿಗೆ ನೀಡಬೇಕೆಂಬುದನ್ನು ಒಪ್ಪಲಾಗುವುದಿಲ್ಲ” ಎಂದಿದ್ದಾರೆ.

“ದೇಣಿಗೆ ನೀಡಿ ಗೋವುಗಳನ್ನು ದತ್ತು ಪಡೆಯುವುದು ಸರ್ಕಾರಿ ನೌಕರರ ಕೆಲಸವಲ್ಲ. ಅದರ ಬದಲಿಗೆ ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸಲು ದೇಣಿಗೆ ಕೇಳಿದರೆ ಸಂತೋಷದಿಂದ ಕೊಡುತ್ತೇವೆ. ಅದು ನಿಜವಾದ ರಾಷ್ಟ್ರನಿರ್ಮಾಣದ ಕೆಲಸ” ಎಂದು ಶಿವಕುಮಾರ್ ತಿಳಿಸಿದ್ದಾರೆ.

ಇಂದು ಈ ಕುರಿತು ಸರ್ಕಾರಿ ನೌಕರರ ಸಭೆ ನಡೆಯುತ್ತಿದ್ದು, ದೇಣಿಗೆ ನೀಡಬೇಕೊ ಬೇಡವೊ ಎಂದು ತೀರ್ಮಾನವಾಗಲಿದೆ. ಪ.ಜಾ ಮತ್ತು ಪ.ಪಂಗಡ ನೌಕರರ ಸಂಘವು ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....