Homeಮುಖಪುಟಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ನಿವಾರಿಸುತ್ತದೆ ಎಂಬ ನಂಬಿಕೆಯಲ್ಲಿ ಹಸುವಿನ ಸಗಣಿ ಬಳಸುವ ಅಭ್ಯಾಸದ ವಿರುದ್ಧ ದೇಶದಲ್ಲಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಹಸುವಿನ ಸಗಣಿ ಕೊರೊನ ನಿವಾರಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.

ಈ ರೀತಿ ಸಗಣಿಯ ಬಳಕೆಯಿಂದ ಇತರ ರೋಗಗಳು ಹರಡುವ ಅಪಾಯವಿದೆ ಎಂದು ದೇಶದಲ್ಲಿ ವೈದ್ಯರು ಹೇಳಿದ್ದಾರೆ. ಗುಜರಾತ್‌ನಲ್ಲಿ, ಕೆಲವು ಮಂದಿ ವಾರಕ್ಕೊಮ್ಮೆ ಗೋಶಾಲೆಗೆ ಹೋಗಿ ತಮ್ಮ ದೇಹವನ್ನು ಗೋವಿನ ಸಗಣಿ ಮತ್ತು ಮೂತ್ರದಲ್ಲಿ ಮುಚ್ಚಿಡುತ್ತಾರೆ, ಇದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ ಮತ್ತು ಕೊರೊನಾ ವೈರಸ್‌ನಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ದೇಶದಲ್ಲಿ ಬಾರಿ ಪರಿಣಾಮ ಉಂಟುಮಾಡಿದ್ದು, ಲಸಿಕೆಗಳ ಕೊರತೆ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ, ಆಕ್ಸಿಜನ್ ಬಿಕ್ಕಟಿಗೆ ಕಾರಣವಾಗಿದೆ. ದೇಶದ ನಾಗರಿಕರು ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ ಅಥವಾ ಔಷಧಿಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ, ಚಿಕಿತ್ಸೆಯ ಕೊರತೆಯಿಂದಾಗಿ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ವೈದ್ಯರು ಸಹ ಇಲ್ಲಿಗೆ ಬರುವುದನ್ನು ನಾವು ನೋಡುತ್ತಿದ್ದೇವೆ. ಈ ಚಿಕಿತ್ಸೆಯು ಅವರ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ  ಇದರಿಂದ ಅವರು ಯಾವುದೇ ಭಯವಿಲ್ಲದೆ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂಬುದು ಅವರ ನಂಬಿಕೆ” ಎಂದು ಔಷಧೀಯ ಕಂಪನಿಯ ಸಹಾಯಕ ವ್ಯವಸ್ಥಾಪಕ ಗೌತಮ್ ಮನಿಲಾಲ್ ಬೋರಿಸಾ ಹೇಳಿದ್ದಾರೆ. ಜೊತೆಗೆ ಕಳೆದ ವರ್ಷ ಕೊರೊನಾದಿಂದ ಗೌತಮ್ ಮನಿಲಾಲ್ ಬೋರಿಸಾ ಅವರು ಚೇತರಿಸಿಕೊಳ್ಳಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ವಿಶ್ವದಾದ್ಯಂತದ ವೈದ್ಯರು ಮತ್ತು ವಿಜ್ಞಾನಿಗಳು ಕೊರೊನಾಗೆ ಪರ್ಯಾಯ ಚಿಕಿತ್ಸೆಯನ್ನು ತೆಗೆದುಕೊಳ್ಳುವುದರ ವಿರುದ್ಧ ಪದೇ ಪದೇ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಭ್ಯಾಸಗಳು ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

“ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಗಣಿ ಅಥವಾ ಗೋ ಮೂತ್ರವು ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ, ಇದು ಸಂಪೂರ್ಣವಾಗಿ ನಂಬಿಕೆಯನ್ನು ಆಧರಿಸಿದೆ” ಎಂದು ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜಯಲಾಲ್ ತಿಳಿಸಿದ್ದಾರೆ.

ಗೋ ಶಾಲೆಯಲ್ಲಿ ಚಿಕಿತ್ಸೆಗಾಗಿ ಬರುವವರರು ತಮ್ಮ ದೇಹದ ಮೇಲಿನ ಸಗಣಿ ಮತ್ತು ಮೂತ್ರದ ಮಿಶ್ರಣವನ್ನು ಬಳಿದುಕೊಂಡು ಅದು ಒಣಗುವವರೆಗೂ ಕಾಯುತ್ತಾರೆ. ಜೊತೆಗೆ ಆಶ್ರಯದಲ್ಲಿರುವ ಹಸುಗಳನ್ನು ತಬ್ಬಿಕೊಳ್ಳುತ್ತಾರೆ, ಗೌರವಿಸುತ್ತಾರೆ. ರೋಗನಿರೋಧಕ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಯೋಗವನ್ನು ಅಭ್ಯಾಸ ಮಾಡುತ್ತಾರೆ. ಸಗಣಿ ಮತ್ತು ಗೋಮೂತ್ರದ ಮಿಶ್ರಣ ಒಣಗಿದ ಮೇಲೆ ಅದನ್ನು ಹಾಲು ಅಥವಾ ಮಜ್ಜಿಗೆಯಿಂದ ತೊಳೆಯಲಾಗುತ್ತದೆ.

ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

“ಈ ಉತ್ಪನ್ನಗಳನ್ನು ಬಳಸುವುದು ಮತ್ತು ಸೇವಿಸುವುದರಿಂದ ಆರೋಗ್ಯದ ಅಪಾಯಗಳೂ ಇವೆ. ಇತರ ರೋಗಗಳು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದು” ಎಂದು ವೈದ್ಯರು ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಹರಡಲು ಗೋಶಾಲೆಯಲ್ಲಿ ಚಿಕಿತ್ಸೆಗೆ ಬರುವ ಜನರು ಕಾರಣವಾಗಬಹುದು ಎಂಬ ಆತಂಕಗಳಿವೆ, ಏಕೆಂದರೆ ಗುಂಪು ಗುಂಪುಗಳಲ್ಲಿ ಜನ ಸೇರುತ್ತಿದ್ದಾರೆ. ಅಹಮದಾಬಾದ್‌ನ ಗೋಶಾಲೆಯ ಉಸ್ತುವಾರಿ ವಹಿಸಿಕೊಂಡಿರುವ ಮಧುಚರಣ್ ದಾಸ್ ಗೋಶಾಲೆಯಲ್ಲಿ ಚಿಕಿತ್ಸೆಗೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...