Homeಮುಖಪುಟಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ನಿವಾರಿಸುತ್ತದೆ ಎಂಬ ನಂಬಿಕೆಯಲ್ಲಿ ಹಸುವಿನ ಸಗಣಿ ಬಳಸುವ ಅಭ್ಯಾಸದ ವಿರುದ್ಧ ದೇಶದಲ್ಲಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಹಸುವಿನ ಸಗಣಿ ಕೊರೊನ ನಿವಾರಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.

ಈ ರೀತಿ ಸಗಣಿಯ ಬಳಕೆಯಿಂದ ಇತರ ರೋಗಗಳು ಹರಡುವ ಅಪಾಯವಿದೆ ಎಂದು ದೇಶದಲ್ಲಿ ವೈದ್ಯರು ಹೇಳಿದ್ದಾರೆ. ಗುಜರಾತ್‌ನಲ್ಲಿ, ಕೆಲವು ಮಂದಿ ವಾರಕ್ಕೊಮ್ಮೆ ಗೋಶಾಲೆಗೆ ಹೋಗಿ ತಮ್ಮ ದೇಹವನ್ನು ಗೋವಿನ ಸಗಣಿ ಮತ್ತು ಮೂತ್ರದಲ್ಲಿ ಮುಚ್ಚಿಡುತ್ತಾರೆ, ಇದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ ಮತ್ತು ಕೊರೊನಾ ವೈರಸ್‌ನಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ದೇಶದಲ್ಲಿ ಬಾರಿ ಪರಿಣಾಮ ಉಂಟುಮಾಡಿದ್ದು, ಲಸಿಕೆಗಳ ಕೊರತೆ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ, ಆಕ್ಸಿಜನ್ ಬಿಕ್ಕಟಿಗೆ ಕಾರಣವಾಗಿದೆ. ದೇಶದ ನಾಗರಿಕರು ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ ಅಥವಾ ಔಷಧಿಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ, ಚಿಕಿತ್ಸೆಯ ಕೊರತೆಯಿಂದಾಗಿ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ವೈದ್ಯರು ಸಹ ಇಲ್ಲಿಗೆ ಬರುವುದನ್ನು ನಾವು ನೋಡುತ್ತಿದ್ದೇವೆ. ಈ ಚಿಕಿತ್ಸೆಯು ಅವರ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ  ಇದರಿಂದ ಅವರು ಯಾವುದೇ ಭಯವಿಲ್ಲದೆ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂಬುದು ಅವರ ನಂಬಿಕೆ” ಎಂದು ಔಷಧೀಯ ಕಂಪನಿಯ ಸಹಾಯಕ ವ್ಯವಸ್ಥಾಪಕ ಗೌತಮ್ ಮನಿಲಾಲ್ ಬೋರಿಸಾ ಹೇಳಿದ್ದಾರೆ. ಜೊತೆಗೆ ಕಳೆದ ವರ್ಷ ಕೊರೊನಾದಿಂದ ಗೌತಮ್ ಮನಿಲಾಲ್ ಬೋರಿಸಾ ಅವರು ಚೇತರಿಸಿಕೊಳ್ಳಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ವಿಶ್ವದಾದ್ಯಂತದ ವೈದ್ಯರು ಮತ್ತು ವಿಜ್ಞಾನಿಗಳು ಕೊರೊನಾಗೆ ಪರ್ಯಾಯ ಚಿಕಿತ್ಸೆಯನ್ನು ತೆಗೆದುಕೊಳ್ಳುವುದರ ವಿರುದ್ಧ ಪದೇ ಪದೇ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಭ್ಯಾಸಗಳು ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

“ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಗಣಿ ಅಥವಾ ಗೋ ಮೂತ್ರವು ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ, ಇದು ಸಂಪೂರ್ಣವಾಗಿ ನಂಬಿಕೆಯನ್ನು ಆಧರಿಸಿದೆ” ಎಂದು ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜಯಲಾಲ್ ತಿಳಿಸಿದ್ದಾರೆ.

ಗೋ ಶಾಲೆಯಲ್ಲಿ ಚಿಕಿತ್ಸೆಗಾಗಿ ಬರುವವರರು ತಮ್ಮ ದೇಹದ ಮೇಲಿನ ಸಗಣಿ ಮತ್ತು ಮೂತ್ರದ ಮಿಶ್ರಣವನ್ನು ಬಳಿದುಕೊಂಡು ಅದು ಒಣಗುವವರೆಗೂ ಕಾಯುತ್ತಾರೆ. ಜೊತೆಗೆ ಆಶ್ರಯದಲ್ಲಿರುವ ಹಸುಗಳನ್ನು ತಬ್ಬಿಕೊಳ್ಳುತ್ತಾರೆ, ಗೌರವಿಸುತ್ತಾರೆ. ರೋಗನಿರೋಧಕ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಯೋಗವನ್ನು ಅಭ್ಯಾಸ ಮಾಡುತ್ತಾರೆ. ಸಗಣಿ ಮತ್ತು ಗೋಮೂತ್ರದ ಮಿಶ್ರಣ ಒಣಗಿದ ಮೇಲೆ ಅದನ್ನು ಹಾಲು ಅಥವಾ ಮಜ್ಜಿಗೆಯಿಂದ ತೊಳೆಯಲಾಗುತ್ತದೆ.

ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

“ಈ ಉತ್ಪನ್ನಗಳನ್ನು ಬಳಸುವುದು ಮತ್ತು ಸೇವಿಸುವುದರಿಂದ ಆರೋಗ್ಯದ ಅಪಾಯಗಳೂ ಇವೆ. ಇತರ ರೋಗಗಳು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದು” ಎಂದು ವೈದ್ಯರು ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಹರಡಲು ಗೋಶಾಲೆಯಲ್ಲಿ ಚಿಕಿತ್ಸೆಗೆ ಬರುವ ಜನರು ಕಾರಣವಾಗಬಹುದು ಎಂಬ ಆತಂಕಗಳಿವೆ, ಏಕೆಂದರೆ ಗುಂಪು ಗುಂಪುಗಳಲ್ಲಿ ಜನ ಸೇರುತ್ತಿದ್ದಾರೆ. ಅಹಮದಾಬಾದ್‌ನ ಗೋಶಾಲೆಯ ಉಸ್ತುವಾರಿ ವಹಿಸಿಕೊಂಡಿರುವ ಮಧುಚರಣ್ ದಾಸ್ ಗೋಶಾಲೆಯಲ್ಲಿ ಚಿಕಿತ್ಸೆಗೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...