Homeಮುಖಪುಟಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

ಕೊರೊನಾ ಚಿಕಿತ್ಸೆಗೆ ಹಸುವಿನ ಸಗಣಿ ಬಳಕೆ ಅಪಾಯಕಾರಿ- ವೈದ್ಯರ ಎಚ್ಚರಿಕೆ

- Advertisement -
- Advertisement -

ಕೊರೊನಾ ವೈರಸ್ ನಿವಾರಿಸುತ್ತದೆ ಎಂಬ ನಂಬಿಕೆಯಲ್ಲಿ ಹಸುವಿನ ಸಗಣಿ ಬಳಸುವ ಅಭ್ಯಾಸದ ವಿರುದ್ಧ ದೇಶದಲ್ಲಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಹಸುವಿನ ಸಗಣಿ ಕೊರೊನ ನಿವಾರಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.

ಈ ರೀತಿ ಸಗಣಿಯ ಬಳಕೆಯಿಂದ ಇತರ ರೋಗಗಳು ಹರಡುವ ಅಪಾಯವಿದೆ ಎಂದು ದೇಶದಲ್ಲಿ ವೈದ್ಯರು ಹೇಳಿದ್ದಾರೆ. ಗುಜರಾತ್‌ನಲ್ಲಿ, ಕೆಲವು ಮಂದಿ ವಾರಕ್ಕೊಮ್ಮೆ ಗೋಶಾಲೆಗೆ ಹೋಗಿ ತಮ್ಮ ದೇಹವನ್ನು ಗೋವಿನ ಸಗಣಿ ಮತ್ತು ಮೂತ್ರದಲ್ಲಿ ಮುಚ್ಚಿಡುತ್ತಾರೆ, ಇದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ ಮತ್ತು ಕೊರೊನಾ ವೈರಸ್‌ನಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವು ದೇಶದಲ್ಲಿ ಬಾರಿ ಪರಿಣಾಮ ಉಂಟುಮಾಡಿದ್ದು, ಲಸಿಕೆಗಳ ಕೊರತೆ, ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ, ಆಕ್ಸಿಜನ್ ಬಿಕ್ಕಟಿಗೆ ಕಾರಣವಾಗಿದೆ. ದೇಶದ ನಾಗರಿಕರು ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ ಅಥವಾ ಔಷಧಿಗಳನ್ನು ಹುಡುಕಲು ಹೆಣಗಾಡುತ್ತಿದ್ದಾರೆ, ಚಿಕಿತ್ಸೆಯ ಕೊರತೆಯಿಂದಾಗಿ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ವೈದ್ಯರು ಸಹ ಇಲ್ಲಿಗೆ ಬರುವುದನ್ನು ನಾವು ನೋಡುತ್ತಿದ್ದೇವೆ. ಈ ಚಿಕಿತ್ಸೆಯು ಅವರ ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ  ಇದರಿಂದ ಅವರು ಯಾವುದೇ ಭಯವಿಲ್ಲದೆ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂಬುದು ಅವರ ನಂಬಿಕೆ” ಎಂದು ಔಷಧೀಯ ಕಂಪನಿಯ ಸಹಾಯಕ ವ್ಯವಸ್ಥಾಪಕ ಗೌತಮ್ ಮನಿಲಾಲ್ ಬೋರಿಸಾ ಹೇಳಿದ್ದಾರೆ. ಜೊತೆಗೆ ಕಳೆದ ವರ್ಷ ಕೊರೊನಾದಿಂದ ಗೌತಮ್ ಮನಿಲಾಲ್ ಬೋರಿಸಾ ಅವರು ಚೇತರಿಸಿಕೊಳ್ಳಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ವಿಶ್ವದಾದ್ಯಂತದ ವೈದ್ಯರು ಮತ್ತು ವಿಜ್ಞಾನಿಗಳು ಕೊರೊನಾಗೆ ಪರ್ಯಾಯ ಚಿಕಿತ್ಸೆಯನ್ನು ತೆಗೆದುಕೊಳ್ಳುವುದರ ವಿರುದ್ಧ ಪದೇ ಪದೇ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಭ್ಯಾಸಗಳು ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

“ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಗಣಿ ಅಥವಾ ಗೋ ಮೂತ್ರವು ಕೆಲಸ ಮಾಡುತ್ತದೆ ಎಂಬುದಕ್ಕೆ ಯಾವುದೇ ದೃಢವಾದ ವೈಜ್ಞಾನಿಕ ಪುರಾವೆಗಳಿಲ್ಲ, ಇದು ಸಂಪೂರ್ಣವಾಗಿ ನಂಬಿಕೆಯನ್ನು ಆಧರಿಸಿದೆ” ಎಂದು ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ.ಜೆ.ಎ.ಜಯಲಾಲ್ ತಿಳಿಸಿದ್ದಾರೆ.

ಗೋ ಶಾಲೆಯಲ್ಲಿ ಚಿಕಿತ್ಸೆಗಾಗಿ ಬರುವವರರು ತಮ್ಮ ದೇಹದ ಮೇಲಿನ ಸಗಣಿ ಮತ್ತು ಮೂತ್ರದ ಮಿಶ್ರಣವನ್ನು ಬಳಿದುಕೊಂಡು ಅದು ಒಣಗುವವರೆಗೂ ಕಾಯುತ್ತಾರೆ. ಜೊತೆಗೆ ಆಶ್ರಯದಲ್ಲಿರುವ ಹಸುಗಳನ್ನು ತಬ್ಬಿಕೊಳ್ಳುತ್ತಾರೆ, ಗೌರವಿಸುತ್ತಾರೆ. ರೋಗನಿರೋಧಕ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಯೋಗವನ್ನು ಅಭ್ಯಾಸ ಮಾಡುತ್ತಾರೆ. ಸಗಣಿ ಮತ್ತು ಗೋಮೂತ್ರದ ಮಿಶ್ರಣ ಒಣಗಿದ ಮೇಲೆ ಅದನ್ನು ಹಾಲು ಅಥವಾ ಮಜ್ಜಿಗೆಯಿಂದ ತೊಳೆಯಲಾಗುತ್ತದೆ.

ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

“ಈ ಉತ್ಪನ್ನಗಳನ್ನು ಬಳಸುವುದು ಮತ್ತು ಸೇವಿಸುವುದರಿಂದ ಆರೋಗ್ಯದ ಅಪಾಯಗಳೂ ಇವೆ. ಇತರ ರೋಗಗಳು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದು” ಎಂದು ವೈದ್ಯರು ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಹರಡಲು ಗೋಶಾಲೆಯಲ್ಲಿ ಚಿಕಿತ್ಸೆಗೆ ಬರುವ ಜನರು ಕಾರಣವಾಗಬಹುದು ಎಂಬ ಆತಂಕಗಳಿವೆ, ಏಕೆಂದರೆ ಗುಂಪು ಗುಂಪುಗಳಲ್ಲಿ ಜನ ಸೇರುತ್ತಿದ್ದಾರೆ. ಅಹಮದಾಬಾದ್‌ನ ಗೋಶಾಲೆಯ ಉಸ್ತುವಾರಿ ವಹಿಸಿಕೊಂಡಿರುವ ಮಧುಚರಣ್ ದಾಸ್ ಗೋಶಾಲೆಯಲ್ಲಿ ಚಿಕಿತ್ಸೆಗೆ ಭಾಗವಹಿಸುವವರ ಸಂಖ್ಯೆಯನ್ನು ಸೀಮಿತಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...