Homeಮುಖಪುಟಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

ಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

- Advertisement -
- Advertisement -

ಕಳೆದ ವಾರ ಮಣಿಪುರದ ಬಿಜೆಪಿ ಮುಖ್ಯಸ್ಥ ಎಸ್.ಟಿಕೇಂದ್ರ ಸಿಂಗ್ ಕೊರೊನಾದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ಕಿಶೋರ್‌ಚಂದ್ರ ವಾಂಗ್ಖೇಮ್ ಮತ್ತು ಸಾಮಾಜಿಕ ಹೋರಾಟಗಾರ ಎರೆಂಡ್ರೊ ಲೈಚೋಂಬಮ್ ವಿರುದ್ಧ ಮಣಿಪುರ ಪೊಲೀಸರು ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಇಬ್ಬರು ಟೀಕೇಂದ್ರ ಅವರ ಸಾವಿಗೆ ಸಂತಾಪ ಸೂಚಿಸುವ ಫೇಸ್‌ಬುಕ್‌ ಪೋಸ್ಟ್‌‌ನಲ್ಲಿ, ‘ಗೋವಿನ ಸೆಗಣಿ ಅಥವಾ ಮೂತ್ರ ಕೊರೊನಾ ಸೋಂಕಿಗೆ ಪರಿಹಾರವಲ್ಲ’ ಎಂದು ಬರೆದಿದ್ದರು. ಇದರ ನಂತರ ಈ ಇಬ್ಬರನ್ನು ಗುರುವಾರ ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ: ಅರವಿಂದ್ ಕೇಜ್ರಿವಾಲ್

ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಉಷಮ್ ದೇಬನ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ. ಪ್ರೇಮಾನಂದ ಮೀಟೆಯವರು ವಾಂಗ್ಖೇಮ್ ಮತ್ತು ಲೈಚೋಂಬಮ್ ವಿರುದ್ಧ ದೂರು ದಾಖಲಿಸಿದ್ದು, ಇದರ ನಂತರ ಪೊಲೀಸರು ಅವರನ್ನು ಅವರ ನಿವಾಸಗಳಿಂದ ಬಂಧಿಸಿ ಕರೆದೊಯ್ದಿದ್ದಾರೆ.

ಈ ಬಂಧನದ ನಂತರ ಅವರಿಗೆ ಸೋಮವಾರ ಜಾಮೀನು ನೀಡಲಾಗಿತ್ತು. ಆದರೆ ಇದರ ನಂತರ ಸರ್ಕಾರವು ಅವರ ವಿರುದ್ದ NSA ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಇಂಫಾಲ್ ಪಶ್ಚಿಮ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿರಣಕುಮಾರ್ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, “ಮುಂದಿನ ಆದೇಶದವರೆಗೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಆಗುವರೆಗೆ ವಾಂಗ್ಖೇಮ್ ಅವರನ್ನು ‘ರಾಷ್ಟ್ರೀಯ ಭದ್ರತಾ ಕಾಯ್ದೆ 1980’ ರ ಸೆಕ್ಷನ್ 3 (2) ರ ಅಡಿಯಲ್ಲಿ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಎರೆಂಡ್ರೊ ಲೈಚೋಂಬಮ್ ಅವರ ಮೇಲೆ NSA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಂಫಾಲ್ ವೆಸ್ಟ್ ಪೊಲೀಸ್ ವರಿಷ್ಠಾಧಿಕಾರಿ ಎಲ್. ಮೇಘಚಂದ್ರ ಸಿಂಗ್ ಹೇಳಿದ್ದಾರೆ. ಲೈಚೋಂಬಮ್‌ ರಾಜಕೀಯ ಸಂಘಟನೆಯಾದ ‘ಪೀಪಲ್ಸ್ ರಿಸರ್ಜೆನ್ಸ್‌‌ ಆಂಡ್‌‌ ಜಸ್ಟಿಸ್‌ ಅಲೈಯನ್ಸ್‌ (ಪಿಆರ್‌‌ಜೆಎ) ಕನ್ವೀನರ್ ಆಗಿದ್ದಾರೆ.

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ವಾಂಗ್ಖೇಮ್‌ ಮತ್ತು ಲೈಚೋಂಬಮ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಈ ಹಿಂದೆ ಕೂಡಾ ಎರಡು ಬಾರಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...