Homeಮುಖಪುಟಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

ಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

- Advertisement -
- Advertisement -

ಕಳೆದ ವಾರ ಮಣಿಪುರದ ಬಿಜೆಪಿ ಮುಖ್ಯಸ್ಥ ಎಸ್.ಟಿಕೇಂದ್ರ ಸಿಂಗ್ ಕೊರೊನಾದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ಕಿಶೋರ್‌ಚಂದ್ರ ವಾಂಗ್ಖೇಮ್ ಮತ್ತು ಸಾಮಾಜಿಕ ಹೋರಾಟಗಾರ ಎರೆಂಡ್ರೊ ಲೈಚೋಂಬಮ್ ವಿರುದ್ಧ ಮಣಿಪುರ ಪೊಲೀಸರು ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಇಬ್ಬರು ಟೀಕೇಂದ್ರ ಅವರ ಸಾವಿಗೆ ಸಂತಾಪ ಸೂಚಿಸುವ ಫೇಸ್‌ಬುಕ್‌ ಪೋಸ್ಟ್‌‌ನಲ್ಲಿ, ‘ಗೋವಿನ ಸೆಗಣಿ ಅಥವಾ ಮೂತ್ರ ಕೊರೊನಾ ಸೋಂಕಿಗೆ ಪರಿಹಾರವಲ್ಲ’ ಎಂದು ಬರೆದಿದ್ದರು. ಇದರ ನಂತರ ಈ ಇಬ್ಬರನ್ನು ಗುರುವಾರ ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ: ಅರವಿಂದ್ ಕೇಜ್ರಿವಾಲ್

ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಉಷಮ್ ದೇಬನ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ. ಪ್ರೇಮಾನಂದ ಮೀಟೆಯವರು ವಾಂಗ್ಖೇಮ್ ಮತ್ತು ಲೈಚೋಂಬಮ್ ವಿರುದ್ಧ ದೂರು ದಾಖಲಿಸಿದ್ದು, ಇದರ ನಂತರ ಪೊಲೀಸರು ಅವರನ್ನು ಅವರ ನಿವಾಸಗಳಿಂದ ಬಂಧಿಸಿ ಕರೆದೊಯ್ದಿದ್ದಾರೆ.

ಈ ಬಂಧನದ ನಂತರ ಅವರಿಗೆ ಸೋಮವಾರ ಜಾಮೀನು ನೀಡಲಾಗಿತ್ತು. ಆದರೆ ಇದರ ನಂತರ ಸರ್ಕಾರವು ಅವರ ವಿರುದ್ದ NSA ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಇಂಫಾಲ್ ಪಶ್ಚಿಮ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿರಣಕುಮಾರ್ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, “ಮುಂದಿನ ಆದೇಶದವರೆಗೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಆಗುವರೆಗೆ ವಾಂಗ್ಖೇಮ್ ಅವರನ್ನು ‘ರಾಷ್ಟ್ರೀಯ ಭದ್ರತಾ ಕಾಯ್ದೆ 1980’ ರ ಸೆಕ್ಷನ್ 3 (2) ರ ಅಡಿಯಲ್ಲಿ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಎರೆಂಡ್ರೊ ಲೈಚೋಂಬಮ್ ಅವರ ಮೇಲೆ NSA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಂಫಾಲ್ ವೆಸ್ಟ್ ಪೊಲೀಸ್ ವರಿಷ್ಠಾಧಿಕಾರಿ ಎಲ್. ಮೇಘಚಂದ್ರ ಸಿಂಗ್ ಹೇಳಿದ್ದಾರೆ. ಲೈಚೋಂಬಮ್‌ ರಾಜಕೀಯ ಸಂಘಟನೆಯಾದ ‘ಪೀಪಲ್ಸ್ ರಿಸರ್ಜೆನ್ಸ್‌‌ ಆಂಡ್‌‌ ಜಸ್ಟಿಸ್‌ ಅಲೈಯನ್ಸ್‌ (ಪಿಆರ್‌‌ಜೆಎ) ಕನ್ವೀನರ್ ಆಗಿದ್ದಾರೆ.

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ವಾಂಗ್ಖೇಮ್‌ ಮತ್ತು ಲೈಚೋಂಬಮ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಈ ಹಿಂದೆ ಕೂಡಾ ಎರಡು ಬಾರಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...