Homeರಾಷ್ಟ್ರೀಯ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

- Advertisement -
- Advertisement -

“ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯ ತಾಳಿರುವುದು ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಂಗ ಬಹುಸಂಖ್ಯಾತವಾದದತ್ತ ವಾಲುತ್ತಿದೆ ಎಂಬ ಟೀಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದಕ್ಕೆ ಅಲಹಾಬಾದ್‌ ಹೈಕೋರ್ಟ್ ನಿಲುವು ಇಂಬು ನೀಡಿದೆ.

ಧಾರ್ಮಿಕ ಮೂಲಭೂತವಾದ, ಕೋಮುವಾದ ರಾರಾಜಿಸುತ್ತಿರುವಾಗ, ಗೋವಿನ ಹೆಸರಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ, ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ಸಮಾಜದಲ್ಲಿ ಕ್ಷೋಭೆ ಉಂಟು ಮಾಡುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಮಾಡಿದ ಆರೋಪಿಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, “ದೇಶದ ಸಂಸ್ಕೃತಿ ಮತ್ತು ನಂಬಿಕೆಗಳಿಗೆ ದಕ್ಕೆಯಾದಾಗ ದೇಶ ದುರ್ಬಲವಾಗುತ್ತದೆ” ಎಂದೂ ಹೇಳಿದೆ.

ಅರ್ಜಿದಾರರು “ಮತ್ತೆ ಮತ್ತೆ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದು, ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದೆ. ಆರೋಪಿಯು ಪರಿಸರವನ್ನು ಹಾಳುಗೆಡುವುತ್ತಿದ್ದಾನೆ. ಗೋವನ್ನು ಪೂಜಿಸಿದರೆ ಮಾತ್ರ ದೇಶ ಏಳಿಗೆ ಹೊಂದುತ್ತದೆ. ಮೂಲಭೂತ ಹಕ್ಕುಗಳು ಗೋವನ್ನು ಭಕ್ಷಿಸುವವರ ಪರಮಾಧಿಕಾರವಲ್ಲ. ಗೋವನ್ನು ಪೂಜಿಸುವವರಿಗೂ, ಅವುಗಳನ್ನು ಅವಲಂಬಿಸಿರುವವರಿಗೂ ಮೂಲಭೂತ ಹಕ್ಕುಗಳಿವೆ. ಗೋಮಾಂಸ ತಿನ್ನುವುದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು” ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿಯೂ ಜಸ್ಟೀಸ್‌ ಶೇಖರ್‌ ಕುಮಾರ್ ಯಾದವ್‌ ಅವರು ಇದ್ದ ಪೀಠ ಅಭಿಪ್ರಾಯಪಟ್ಟಿದೆ.

ಗೋವನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಗೋವನ್ನು ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರೂ ಪೂಜನೀಯ ಭಾವನೆಗಳನ್ನು ಹೊಂದಿದ್ದರು. ಬಾಬರ್‌, ಅಕ್ಬರ್‌, ಹುಮಾಯೂನ್‌ ಕಾಲದಲ್ಲಿ ಗೋವಿನ ಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದೂ ಕೋರ್ಟ್ ಹೇಳಿದೆ.

ಗೋವುಗಳು ಹಾದಿ ಬೀದಿಯಲ್ಲಿ ಅನಾಥವಾಗುತ್ತಿವೆ. ಸರ್ಕಾರ ಅವುಗಳ ರಕ್ಷಣೆಗೆ ಧಾವಿಸಬೇಕು. ವಯಸ್ಸಾದ ಹಸುಗಳಲ್ಲಿ ಬೀದಿಯಲ್ಲಿ ಬಿಟ್ಟು, ಅವು ವಿಷಕಾರಿ ವಸ್ತುಗಳನ್ನು ಸೇವಿಸಿ ಸಾಯುವುದನ್ನೂ ತಪ್ಪಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಗೋವಿನ ರಕ್ಷಣೆ ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಗೋವು ಉಸಿರಾಡುವಾಗ ಆಮ್ಲಜನಕವನ್ನು ಹೊರಗೆ ಬಿಡುತ್ತದೆ ಎಂದು ಹೇಳಿರುವುದರಲ್ಲಿ ಯಾವುದೇ ಹುರಳಿಲ್ಲ. ಉತ್ತರಖಂಡ್‌ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಹಿಂದೊಮ್ಮೆ ಇದೇ ಅಭಿಪ್ರಾಯನ್ನು ತಾಳಿದಾಗ, ಪ್ರಾಣಿವಿಜ್ಞಾನ ತಜ್ಞರು ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು. ಮನುಷ್ಯನಂತೆಯೇ ಗೋವು ಕೂಡ ಉಚ್ಛಾಸ, ನಿಶ್ವಾಸವನ್ನು ಹೊಂದಿದ್ದು, ಇಂಗಾಲವನ್ನು ಒಳಗೆ ತೆಗೆದುಕೊಂಡು, ಆಮ್ಲಜನಕವನ್ನು ಹೊರಗೆ ಬಿಡುತ್ತವೆ’ ಎಂದಿದ್ದರು ತಜ್ಞರು.

ಭಾವನಾತ್ಮಕ ಸಂಗತಿಗಳನ್ನೇ ವೈಜ್ಞಾನಿಕ ವಿಚಾರಗಳಂತೆ ಬಿಂಬಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದನ್ನು ಹೈಕೋರ್ಟ್‌ ಕೂಡ ಪರಿಶೀಲಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ. ಗೋವಿನ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬ ವಾದದಲ್ಲೂ ಯಾವುದೇ ಹುರುಳಿಲ್ಲ. ಗೋವಿನ ಮಾಂಸ ರಫ್ತಿನಲ್ಲಿರುವ ಭಾರತ ಮುಂಚೂಣಿಯಲ್ಲಿದೆ. ಹೀಗಿರುವಾಗ ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ರಾಜಕೀಯ ಹಿತಾಸಕ್ತಿಗಳಿಗೆ ಬಲ ನೀಡುತ್ತವೆ ಎಂಬ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಮೂಡಿಗೆರೆ: ದಲಿತ ಯುವಕ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...