Homeರಾಷ್ಟ್ರೀಯ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

- Advertisement -
- Advertisement -

“ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯ ತಾಳಿರುವುದು ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಂಗ ಬಹುಸಂಖ್ಯಾತವಾದದತ್ತ ವಾಲುತ್ತಿದೆ ಎಂಬ ಟೀಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದಕ್ಕೆ ಅಲಹಾಬಾದ್‌ ಹೈಕೋರ್ಟ್ ನಿಲುವು ಇಂಬು ನೀಡಿದೆ.

ಧಾರ್ಮಿಕ ಮೂಲಭೂತವಾದ, ಕೋಮುವಾದ ರಾರಾಜಿಸುತ್ತಿರುವಾಗ, ಗೋವಿನ ಹೆಸರಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ, ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ಸಮಾಜದಲ್ಲಿ ಕ್ಷೋಭೆ ಉಂಟು ಮಾಡುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಮಾಡಿದ ಆರೋಪಿಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, “ದೇಶದ ಸಂಸ್ಕೃತಿ ಮತ್ತು ನಂಬಿಕೆಗಳಿಗೆ ದಕ್ಕೆಯಾದಾಗ ದೇಶ ದುರ್ಬಲವಾಗುತ್ತದೆ” ಎಂದೂ ಹೇಳಿದೆ.

ಅರ್ಜಿದಾರರು “ಮತ್ತೆ ಮತ್ತೆ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದು, ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದೆ. ಆರೋಪಿಯು ಪರಿಸರವನ್ನು ಹಾಳುಗೆಡುವುತ್ತಿದ್ದಾನೆ. ಗೋವನ್ನು ಪೂಜಿಸಿದರೆ ಮಾತ್ರ ದೇಶ ಏಳಿಗೆ ಹೊಂದುತ್ತದೆ. ಮೂಲಭೂತ ಹಕ್ಕುಗಳು ಗೋವನ್ನು ಭಕ್ಷಿಸುವವರ ಪರಮಾಧಿಕಾರವಲ್ಲ. ಗೋವನ್ನು ಪೂಜಿಸುವವರಿಗೂ, ಅವುಗಳನ್ನು ಅವಲಂಬಿಸಿರುವವರಿಗೂ ಮೂಲಭೂತ ಹಕ್ಕುಗಳಿವೆ. ಗೋಮಾಂಸ ತಿನ್ನುವುದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು” ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿಯೂ ಜಸ್ಟೀಸ್‌ ಶೇಖರ್‌ ಕುಮಾರ್ ಯಾದವ್‌ ಅವರು ಇದ್ದ ಪೀಠ ಅಭಿಪ್ರಾಯಪಟ್ಟಿದೆ.

ಗೋವನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಗೋವನ್ನು ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರೂ ಪೂಜನೀಯ ಭಾವನೆಗಳನ್ನು ಹೊಂದಿದ್ದರು. ಬಾಬರ್‌, ಅಕ್ಬರ್‌, ಹುಮಾಯೂನ್‌ ಕಾಲದಲ್ಲಿ ಗೋವಿನ ಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದೂ ಕೋರ್ಟ್ ಹೇಳಿದೆ.

ಗೋವುಗಳು ಹಾದಿ ಬೀದಿಯಲ್ಲಿ ಅನಾಥವಾಗುತ್ತಿವೆ. ಸರ್ಕಾರ ಅವುಗಳ ರಕ್ಷಣೆಗೆ ಧಾವಿಸಬೇಕು. ವಯಸ್ಸಾದ ಹಸುಗಳಲ್ಲಿ ಬೀದಿಯಲ್ಲಿ ಬಿಟ್ಟು, ಅವು ವಿಷಕಾರಿ ವಸ್ತುಗಳನ್ನು ಸೇವಿಸಿ ಸಾಯುವುದನ್ನೂ ತಪ್ಪಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಗೋವಿನ ರಕ್ಷಣೆ ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಗೋವು ಉಸಿರಾಡುವಾಗ ಆಮ್ಲಜನಕವನ್ನು ಹೊರಗೆ ಬಿಡುತ್ತದೆ ಎಂದು ಹೇಳಿರುವುದರಲ್ಲಿ ಯಾವುದೇ ಹುರಳಿಲ್ಲ. ಉತ್ತರಖಂಡ್‌ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಹಿಂದೊಮ್ಮೆ ಇದೇ ಅಭಿಪ್ರಾಯನ್ನು ತಾಳಿದಾಗ, ಪ್ರಾಣಿವಿಜ್ಞಾನ ತಜ್ಞರು ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು. ಮನುಷ್ಯನಂತೆಯೇ ಗೋವು ಕೂಡ ಉಚ್ಛಾಸ, ನಿಶ್ವಾಸವನ್ನು ಹೊಂದಿದ್ದು, ಇಂಗಾಲವನ್ನು ಒಳಗೆ ತೆಗೆದುಕೊಂಡು, ಆಮ್ಲಜನಕವನ್ನು ಹೊರಗೆ ಬಿಡುತ್ತವೆ’ ಎಂದಿದ್ದರು ತಜ್ಞರು.

ಭಾವನಾತ್ಮಕ ಸಂಗತಿಗಳನ್ನೇ ವೈಜ್ಞಾನಿಕ ವಿಚಾರಗಳಂತೆ ಬಿಂಬಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದನ್ನು ಹೈಕೋರ್ಟ್‌ ಕೂಡ ಪರಿಶೀಲಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ. ಗೋವಿನ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬ ವಾದದಲ್ಲೂ ಯಾವುದೇ ಹುರುಳಿಲ್ಲ. ಗೋವಿನ ಮಾಂಸ ರಫ್ತಿನಲ್ಲಿರುವ ಭಾರತ ಮುಂಚೂಣಿಯಲ್ಲಿದೆ. ಹೀಗಿರುವಾಗ ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ರಾಜಕೀಯ ಹಿತಾಸಕ್ತಿಗಳಿಗೆ ಬಲ ನೀಡುತ್ತವೆ ಎಂಬ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಮೂಡಿಗೆರೆ: ದಲಿತ ಯುವಕ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...