Homeರಾಷ್ಟ್ರೀಯ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

- Advertisement -
- Advertisement -

“ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯ ತಾಳಿರುವುದು ಚರ್ಚೆಗೆ ಗ್ರಾಸವಾಗಿದೆ. ನ್ಯಾಯಾಂಗ ಬಹುಸಂಖ್ಯಾತವಾದದತ್ತ ವಾಲುತ್ತಿದೆ ಎಂಬ ಟೀಕೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದಕ್ಕೆ ಅಲಹಾಬಾದ್‌ ಹೈಕೋರ್ಟ್ ನಿಲುವು ಇಂಬು ನೀಡಿದೆ.

ಧಾರ್ಮಿಕ ಮೂಲಭೂತವಾದ, ಕೋಮುವಾದ ರಾರಾಜಿಸುತ್ತಿರುವಾಗ, ಗೋವಿನ ಹೆಸರಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ, ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ಸಮಾಜದಲ್ಲಿ ಕ್ಷೋಭೆ ಉಂಟು ಮಾಡುತ್ತವೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಗೋಹತ್ಯೆ ಮಾಡಿದ ಆರೋಪಿಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, “ದೇಶದ ಸಂಸ್ಕೃತಿ ಮತ್ತು ನಂಬಿಕೆಗಳಿಗೆ ದಕ್ಕೆಯಾದಾಗ ದೇಶ ದುರ್ಬಲವಾಗುತ್ತದೆ” ಎಂದೂ ಹೇಳಿದೆ.

ಅರ್ಜಿದಾರರು “ಮತ್ತೆ ಮತ್ತೆ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದು, ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದೆ. ಆರೋಪಿಯು ಪರಿಸರವನ್ನು ಹಾಳುಗೆಡುವುತ್ತಿದ್ದಾನೆ. ಗೋವನ್ನು ಪೂಜಿಸಿದರೆ ಮಾತ್ರ ದೇಶ ಏಳಿಗೆ ಹೊಂದುತ್ತದೆ. ಮೂಲಭೂತ ಹಕ್ಕುಗಳು ಗೋವನ್ನು ಭಕ್ಷಿಸುವವರ ಪರಮಾಧಿಕಾರವಲ್ಲ. ಗೋವನ್ನು ಪೂಜಿಸುವವರಿಗೂ, ಅವುಗಳನ್ನು ಅವಲಂಬಿಸಿರುವವರಿಗೂ ಮೂಲಭೂತ ಹಕ್ಕುಗಳಿವೆ. ಗೋಮಾಂಸ ತಿನ್ನುವುದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು” ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿಯೂ ಜಸ್ಟೀಸ್‌ ಶೇಖರ್‌ ಕುಮಾರ್ ಯಾದವ್‌ ಅವರು ಇದ್ದ ಪೀಠ ಅಭಿಪ್ರಾಯಪಟ್ಟಿದೆ.

ಗೋವನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಗೋವನ್ನು ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರೂ ಪೂಜನೀಯ ಭಾವನೆಗಳನ್ನು ಹೊಂದಿದ್ದರು. ಬಾಬರ್‌, ಅಕ್ಬರ್‌, ಹುಮಾಯೂನ್‌ ಕಾಲದಲ್ಲಿ ಗೋವಿನ ಹತ್ಯೆಯನ್ನು ನಿಷೇಧಿಸಲಾಗಿತ್ತು ಎಂದೂ ಕೋರ್ಟ್ ಹೇಳಿದೆ.

ಗೋವುಗಳು ಹಾದಿ ಬೀದಿಯಲ್ಲಿ ಅನಾಥವಾಗುತ್ತಿವೆ. ಸರ್ಕಾರ ಅವುಗಳ ರಕ್ಷಣೆಗೆ ಧಾವಿಸಬೇಕು. ವಯಸ್ಸಾದ ಹಸುಗಳಲ್ಲಿ ಬೀದಿಯಲ್ಲಿ ಬಿಟ್ಟು, ಅವು ವಿಷಕಾರಿ ವಸ್ತುಗಳನ್ನು ಸೇವಿಸಿ ಸಾಯುವುದನ್ನೂ ತಪ್ಪಿಸಬೇಕು. ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ಗೋವಿನ ರಕ್ಷಣೆ ಮೂಲಭೂತ ಹಕ್ಕೆಂದು ಪರಿಗಣಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಗೋವು ಉಸಿರಾಡುವಾಗ ಆಮ್ಲಜನಕವನ್ನು ಹೊರಗೆ ಬಿಡುತ್ತದೆ ಎಂದು ಹೇಳಿರುವುದರಲ್ಲಿ ಯಾವುದೇ ಹುರಳಿಲ್ಲ. ಉತ್ತರಖಂಡ್‌ ಮುಖ್ಯಮಂತ್ರಿಯಾಗಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಹಿಂದೊಮ್ಮೆ ಇದೇ ಅಭಿಪ್ರಾಯನ್ನು ತಾಳಿದಾಗ, ಪ್ರಾಣಿವಿಜ್ಞಾನ ತಜ್ಞರು ಅವರ ಹೇಳಿಕೆಯನ್ನು ಅಲ್ಲಗಳೆದಿದ್ದರು. ಮನುಷ್ಯನಂತೆಯೇ ಗೋವು ಕೂಡ ಉಚ್ಛಾಸ, ನಿಶ್ವಾಸವನ್ನು ಹೊಂದಿದ್ದು, ಇಂಗಾಲವನ್ನು ಒಳಗೆ ತೆಗೆದುಕೊಂಡು, ಆಮ್ಲಜನಕವನ್ನು ಹೊರಗೆ ಬಿಡುತ್ತವೆ’ ಎಂದಿದ್ದರು ತಜ್ಞರು.

ಭಾವನಾತ್ಮಕ ಸಂಗತಿಗಳನ್ನೇ ವೈಜ್ಞಾನಿಕ ವಿಚಾರಗಳಂತೆ ಬಿಂಬಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದನ್ನು ಹೈಕೋರ್ಟ್‌ ಕೂಡ ಪರಿಶೀಲಿಸಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ. ಗೋವಿನ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬ ವಾದದಲ್ಲೂ ಯಾವುದೇ ಹುರುಳಿಲ್ಲ. ಗೋವಿನ ಮಾಂಸ ರಫ್ತಿನಲ್ಲಿರುವ ಭಾರತ ಮುಂಚೂಣಿಯಲ್ಲಿದೆ. ಹೀಗಿರುವಾಗ ನ್ಯಾಯಾಂಗ ತಾಳುವ ಇಂತಹ ನಿರ್ಧಾರಗಳು ರಾಜಕೀಯ ಹಿತಾಸಕ್ತಿಗಳಿಗೆ ಬಲ ನೀಡುತ್ತವೆ ಎಂಬ ಟೀಕೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಮೂಡಿಗೆರೆ: ದಲಿತ ಯುವಕ ಮೂತ್ರ ಕುಡಿಸಿದ್ದ ಪಿಎಸ್‌ಐ ಅರ್ಜುನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...