Homeಮುಖಪುಟಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

- Advertisement -
- Advertisement -

ಉತ್ತರ ಪ್ರದೇಶದ ಗೋಹತ್ಯೆ ನಿಷೇಧ ಕಾನೂನಿನ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಪ್ಪಾಗಿ ಅರ್ಜಿದಾರರನ್ನು ಸಿಲುಕಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಕರಣ ದಾಖಲಿಸಿದ್ದ ಸೀತಾಪುರ ಪೊಲೀಸರ ಕ್ರಮಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದೆ.

ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಅವರ ನ್ಯಾಯಪೀಠವು ಫೆಬ್ರವರಿ 25 ರಂದು ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಸೂರಜ್ (22) ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ಇಬ್ರಾಹಿಂ, ಅನೀಶ್ ಮತ್ತು ಶಹ್‌ಜಾದ್‌ ಪ್ರಕರಣದ ಇನ್ನಿತರ ಆರೋಪಿಗಳಾಗಿದ್ದಾರೆ.

ಮೂರು ಹಸುಗಳನ್ನು ಕೊಂದ ಬಗ್ಗೆ ಆರೋಪಿಗಳ ನಡುವೆ ನಡೆದ ಸಂಭಾಷಣೆಯನ್ನು ಪೊಲೀಸ್ ತಂಡ ಕೇಳಿದೆ ಎಂದು ಆರೋಪಿಸಿ ಪೊಲೀಸರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಮಾಹಿತಿದಾರರ ಆಧಾರದ ಮೇಲೆ, ಪೊಲೀಸರು ಈ ಆರೋಪಿತರನ್ನು ಹಿಂಬಾಲಿಸಿದೆ. ಇವರು ಮೂರು ಹಸುಗಳನ್ನು ಕೊಂದಿದ್ದಾರೆ ಅದಕ್ಕಾಗಿ ದೊಡ್ಡ ಮೊತ್ತವನ್ನು ಪಡೆದಿದ್ದಾರೆ ಎಂದು ಪೊದೆಗಳಲ್ಲಿ ಪರಸ್ಪರ ಮಾತನಾಡುವುದನ್ನು ಕೇಳಿಸಿಕೊಂಡಿದ್ದಾರೆ. ಇದರ ಜೊತೆಗೆ ತಮ್ಮ ಬಳಿ ಇರುವ ಇನ್ನು  2 ಎತ್ತುಗಳನ್ನು ವಧಿಸಲು ಯೋಜಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ಎತ್ತುಗಳು, ಒಂದು ಕಟ್ಟು ಹಗ್ಗ, ಒಂದು ಸುತ್ತಿಗೆ, ಒಂದು ಉಗುರು ಮತ್ತು ತಲಾ 5 ಕೆಜಿ ತೂಕದ 12 ಖಾಲಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಹಿರಿಯ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ಪಾಂಡೆ ಸಲ್ಲಿಸಿದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್ ಪ್ರಕಾರ ಆರೋಪಿಗಳ ಬಳಿ ವಶಪಡಿಸಿಕೊಂಡ ಎತ್ತುಗಳನ್ನು ಹತ್ಯೆ ಮಾಡಿಲ್ಲ. ಅವು ಅಂಗವಿಕಲರಾಗಿಲ್ಲ ಅಥವಾ ಯಾವುದೇ ರೀತಿಯ ದೈಹಿಕ ಗಾಯಗಳಿಗೆ ಒಳಗಾಗಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ಅಲಹಾಬಾದ್ ನ್ಯಾಯಾಲಯ ಹೇಳಿದೆ.

“ಕೇವಲ ಆಪಾದಿತರ ಸಂಭಾಷಣೆಯ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ, ಆರೋಪಿಗಳಿಂದ ವಶ ಪಡೆದ ಎರಡು ಎತ್ತುಗಳನ್ನು ಆರೋಗ್ಯವಾಗಿವೆ. ಇದು ಗೋಹತ್ಯೆ ನಿಷೇಧ ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಬರುವುದಿಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ನ್ಯಾಯಲಯ ಹೇಳಿದೆ.

ಆರೋಪಿಗಳಿಗೆ ಜಾಮೀನು ನೀಡಿದ ಅಲಹಾಬಾದ್ ನ್ಯಾಯಾಲಯ, ಪ್ರಕರಣದ ಕುರಿತು ಅಫಿಡವಿಟ್ ಸಲ್ಲಿಸಲು ಸೀತಾಪುರ ಎಸ್‌ಪಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಜೂನ್ 16 ರಂದು ವಿಚಾರಣೆಯನ್ನು ಮುಂದೂಡಿದೆ.


ಇದನ್ನೂ ಓದಿ: ಕೇರಳದ ಆರ್ಥಿಕತೆ ಮೇಲೆತ್ತಲು 77,350 ಉದ್ಯೋಗ ಸೃಷ್ಟಿಗೆ ಮುಂದಾದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...