Homeಮುಖಪುಟಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

- Advertisement -
- Advertisement -

ಉತ್ತರ ಪ್ರದೇಶದ ಗೋಹತ್ಯೆ ನಿಷೇಧ ಕಾನೂನಿನ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಪ್ಪಾಗಿ ಅರ್ಜಿದಾರರನ್ನು ಸಿಲುಕಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಕರಣ ದಾಖಲಿಸಿದ್ದ ಸೀತಾಪುರ ಪೊಲೀಸರ ಕ್ರಮಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದೆ.

ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಅವರ ನ್ಯಾಯಪೀಠವು ಫೆಬ್ರವರಿ 25 ರಂದು ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಸೂರಜ್ (22) ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ಇಬ್ರಾಹಿಂ, ಅನೀಶ್ ಮತ್ತು ಶಹ್‌ಜಾದ್‌ ಪ್ರಕರಣದ ಇನ್ನಿತರ ಆರೋಪಿಗಳಾಗಿದ್ದಾರೆ.

ಮೂರು ಹಸುಗಳನ್ನು ಕೊಂದ ಬಗ್ಗೆ ಆರೋಪಿಗಳ ನಡುವೆ ನಡೆದ ಸಂಭಾಷಣೆಯನ್ನು ಪೊಲೀಸ್ ತಂಡ ಕೇಳಿದೆ ಎಂದು ಆರೋಪಿಸಿ ಪೊಲೀಸರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಮಾಹಿತಿದಾರರ ಆಧಾರದ ಮೇಲೆ, ಪೊಲೀಸರು ಈ ಆರೋಪಿತರನ್ನು ಹಿಂಬಾಲಿಸಿದೆ. ಇವರು ಮೂರು ಹಸುಗಳನ್ನು ಕೊಂದಿದ್ದಾರೆ ಅದಕ್ಕಾಗಿ ದೊಡ್ಡ ಮೊತ್ತವನ್ನು ಪಡೆದಿದ್ದಾರೆ ಎಂದು ಪೊದೆಗಳಲ್ಲಿ ಪರಸ್ಪರ ಮಾತನಾಡುವುದನ್ನು ಕೇಳಿಸಿಕೊಂಡಿದ್ದಾರೆ. ಇದರ ಜೊತೆಗೆ ತಮ್ಮ ಬಳಿ ಇರುವ ಇನ್ನು  2 ಎತ್ತುಗಳನ್ನು ವಧಿಸಲು ಯೋಜಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ಎತ್ತುಗಳು, ಒಂದು ಕಟ್ಟು ಹಗ್ಗ, ಒಂದು ಸುತ್ತಿಗೆ, ಒಂದು ಉಗುರು ಮತ್ತು ತಲಾ 5 ಕೆಜಿ ತೂಕದ 12 ಖಾಲಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಹಿರಿಯ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ಪಾಂಡೆ ಸಲ್ಲಿಸಿದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್ ಪ್ರಕಾರ ಆರೋಪಿಗಳ ಬಳಿ ವಶಪಡಿಸಿಕೊಂಡ ಎತ್ತುಗಳನ್ನು ಹತ್ಯೆ ಮಾಡಿಲ್ಲ. ಅವು ಅಂಗವಿಕಲರಾಗಿಲ್ಲ ಅಥವಾ ಯಾವುದೇ ರೀತಿಯ ದೈಹಿಕ ಗಾಯಗಳಿಗೆ ಒಳಗಾಗಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ಅಲಹಾಬಾದ್ ನ್ಯಾಯಾಲಯ ಹೇಳಿದೆ.

“ಕೇವಲ ಆಪಾದಿತರ ಸಂಭಾಷಣೆಯ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ, ಆರೋಪಿಗಳಿಂದ ವಶ ಪಡೆದ ಎರಡು ಎತ್ತುಗಳನ್ನು ಆರೋಗ್ಯವಾಗಿವೆ. ಇದು ಗೋಹತ್ಯೆ ನಿಷೇಧ ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಬರುವುದಿಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ನ್ಯಾಯಲಯ ಹೇಳಿದೆ.

ಆರೋಪಿಗಳಿಗೆ ಜಾಮೀನು ನೀಡಿದ ಅಲಹಾಬಾದ್ ನ್ಯಾಯಾಲಯ, ಪ್ರಕರಣದ ಕುರಿತು ಅಫಿಡವಿಟ್ ಸಲ್ಲಿಸಲು ಸೀತಾಪುರ ಎಸ್‌ಪಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಜೂನ್ 16 ರಂದು ವಿಚಾರಣೆಯನ್ನು ಮುಂದೂಡಿದೆ.


ಇದನ್ನೂ ಓದಿ: ಕೇರಳದ ಆರ್ಥಿಕತೆ ಮೇಲೆತ್ತಲು 77,350 ಉದ್ಯೋಗ ಸೃಷ್ಟಿಗೆ ಮುಂದಾದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...